10 ವರ್ಷ;130 ಲಕ್ಷ ಕೋಟಿ ಸಾಲ; ಒಂದೇ ಒಂದು ಪ್ರೆಸ್‌ ಮೀಟ್‌ ಕರೆದು ವಿವರ ನೀಡುವಿರಾ ಪಿಎಂ ಮೋದಿ; ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ  

ಬೆಂಗಳೂರು: 2014ರಿಂದ 2025ರವರೆಗೆ ಕೇವಲ 10  ವರ್ಷಗಳಲ್ಲಿ 130 ಲಕ್ಷ ಕೋಟಿ ಸಾಲ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸ್ವತಂತ್ರಾನಂತರ 67 ವರ್ಷಗಳಲ್ಲಿ ಶೂನ್ಯದಿಂದ ದೇಶವನ್ನು ಕಟ್ಟಲಾಗಿದೆ, ಬೃಹತ್ ಅಣೆಕಟ್ಟುಗಳು, ಬೃಹತ್ ಕೈಗಾರಿಕೆಗಳು, ವಿಸ್ತಾರದ ರೈಲ್ವೆ ವ್ಯವಸ್ಥೆ, ಏಮ್ಸ್ ನಂತಹ ಸುಸಜ್ಜಿತ ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಕಟ್ಟಲಾಗಿದೆ, ಬಾಹ್ಯಾಕಾಶ ಸಾಧನೆಗಳನ್ನು ಮಾಡಲಾಗಿದೆ, ಮೂರು ಯುದ್ಧಗಳನ್ನು ಎದುರಿಸಲಾಗಿದೆ. ಜಗತ್ತಿನ 4ನೇ ಶಕ್ತಿಶಾಲಿ ಸೈನ್ಯವನ್ನು ಕಟ್ಟಲಾಗಿದೆ, ರಸ್ತೆ, ನೀರು, ವಿದ್ಯುತ್ ನಂತಹ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ, ಅಣು ಪರೀಕ್ಷೆ ನಡೆಸಲಾಗಿದೆ.

67ವರ್ಷಗಳಲ್ಲಿನ ಇಷ್ಟೆಲ್ಲಾ ಸಾಧನೆಗಳ ಹೊರತಾಗಿಯೂ ಭಾರತದ ಸಾಲ 54 ಲಕ್ಷ ಕೋಟಿ ಮಾತ್ರವಿತ್ತು, ಆದರೆ ಕೇವಲ 10 ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚು ಸಾಲ ಮಾಡಿದ ಮೋದಿ ಸರ್ಕಾರ ದೇಶಕ್ಕೆ ಕೊಟ್ಟಿದ್ದೇನು? ಈ ಸಾಲದ ಹಣ ಎಲ್ಲಿ ಹೋಯ್ತು? ಎಲ್ಲಿ ವಿನಿಯೋಗವಾಯ್ತು? ಎಂದು ಪ್ರಶ್ನಿಸಿದ್ದಾರೆ.

ತೆರಿಗೆ ಹೆಸರಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದರೂ ಇಷ್ಟು ಮೊತ್ತದ ಸಾಲ ಮಾಡಿದ್ದೇಕೆ? ಯಾರ ಜೇಬು ತುಂಬಿಸುವುದಕ್ಕೆ?

ಬಿಜೆಪಿ ಈ ಬಗ್ಗೆ ಮಾತನಾಡುವುದೇ? ಪ್ರಧಾನಿ ಕೇವಲ ಒಂದೇ ಒಂದಾದರೂ ಪತ್ರಿಕಾಗೋಷ್ಠಿ ನಡೆಸಿ ಈ ಬೃಹತ್ ಸಾಲದ ಕಾರಣವನ್ನು ತಿಳಿಸುವರೇ?ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ಬೆಂಗಳೂರು: 2014ರಿಂದ 2025ರವರೆಗೆ ಕೇವಲ 10  ವರ್ಷಗಳಲ್ಲಿ 130 ಲಕ್ಷ ಕೋಟಿ ಸಾಲ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸ್ವತಂತ್ರಾನಂತರ 67 ವರ್ಷಗಳಲ್ಲಿ ಶೂನ್ಯದಿಂದ ದೇಶವನ್ನು ಕಟ್ಟಲಾಗಿದೆ, ಬೃಹತ್ ಅಣೆಕಟ್ಟುಗಳು, ಬೃಹತ್ ಕೈಗಾರಿಕೆಗಳು, ವಿಸ್ತಾರದ ರೈಲ್ವೆ ವ್ಯವಸ್ಥೆ, ಏಮ್ಸ್ ನಂತಹ ಸುಸಜ್ಜಿತ ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಕಟ್ಟಲಾಗಿದೆ, ಬಾಹ್ಯಾಕಾಶ ಸಾಧನೆಗಳನ್ನು ಮಾಡಲಾಗಿದೆ, ಮೂರು ಯುದ್ಧಗಳನ್ನು ಎದುರಿಸಲಾಗಿದೆ. ಜಗತ್ತಿನ 4ನೇ ಶಕ್ತಿಶಾಲಿ ಸೈನ್ಯವನ್ನು ಕಟ್ಟಲಾಗಿದೆ, ರಸ್ತೆ, ನೀರು, ವಿದ್ಯುತ್ ನಂತಹ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ, ಅಣು ಪರೀಕ್ಷೆ ನಡೆಸಲಾಗಿದೆ.

67ವರ್ಷಗಳಲ್ಲಿನ ಇಷ್ಟೆಲ್ಲಾ ಸಾಧನೆಗಳ ಹೊರತಾಗಿಯೂ ಭಾರತದ ಸಾಲ 54 ಲಕ್ಷ ಕೋಟಿ ಮಾತ್ರವಿತ್ತು, ಆದರೆ ಕೇವಲ 10 ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚು ಸಾಲ ಮಾಡಿದ ಮೋದಿ ಸರ್ಕಾರ ದೇಶಕ್ಕೆ ಕೊಟ್ಟಿದ್ದೇನು? ಈ ಸಾಲದ ಹಣ ಎಲ್ಲಿ ಹೋಯ್ತು? ಎಲ್ಲಿ ವಿನಿಯೋಗವಾಯ್ತು? ಎಂದು ಪ್ರಶ್ನಿಸಿದ್ದಾರೆ.

ತೆರಿಗೆ ಹೆಸರಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದರೂ ಇಷ್ಟು ಮೊತ್ತದ ಸಾಲ ಮಾಡಿದ್ದೇಕೆ? ಯಾರ ಜೇಬು ತುಂಬಿಸುವುದಕ್ಕೆ?

ಬಿಜೆಪಿ ಈ ಬಗ್ಗೆ ಮಾತನಾಡುವುದೇ? ಪ್ರಧಾನಿ ಕೇವಲ ಒಂದೇ ಒಂದಾದರೂ ಪತ್ರಿಕಾಗೋಷ್ಠಿ ನಡೆಸಿ ಈ ಬೃಹತ್ ಸಾಲದ ಕಾರಣವನ್ನು ತಿಳಿಸುವರೇ?ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

More articles

Latest article

Most read