ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗ ಮೃತಪಟ್ಟ ಪ್ರಕರಣ ಕುರಿತು ತನಿಖೆ ನಡೆಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಈ ಮೃಗಾಲಯದಲ್ಲಿ ಗುರುವಾರ 8 ಮತ್ತು ಶನಿವಾರ 20 ಕೃಷ್ಣಮೃಗಗಳು ಅಸು ನೀಗಿದ್ದವು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಪ್ರತಿಕ್ರಿಯೆ ನೀಡಿದ್ದು, ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 38 ಕೃಷ್ಣಮೃಗಗಳಿದ್ದವು. 4ರಿಂದ 6 ವರ್ಷ ವಯಸ್ಸಿನ ಪ್ರಾಣಿಗಳು ಯಾವುದೋ ಸೋಂಕಿನಿಂದ ಮೃತಪಟ್ಟಿರುವ ಅನುಮಾನ ಇದೆ. ಆದರೂ ತನಿಖೆ ನಡೆಸಿ ಸಾವಿಗೆ ಕಾರಣವನ್ನು ಪತ್ತೆ ಹಚ್ಚುವುದಾಗಿ ತಿಳಿಸಿದರು.
ಈ ಮಧ್ಯೆ ಪ್ರಕರಣ ಕುರಿತು ಮಾತನಾಡಿರುವ ಸಚಿವರು ಕೃಷ್ಣಮೃಗಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ’ ಎಂದು ಹೇಳಿದ್ದಾರೆ.

