ಮಂಡ್ಯದಲ್ಲಿ ಬಿರುಗಾಳಿ ಸಹಿತ ಮಳೆ, ರೈಲಿನ ಮೇಲೆ ಬಿದ್ದ ಮರ ; ಲೋಕೋ ಪೈಲಟ್‌ಗೆ ಗಾಯ

Most read

ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಮಂಡ್ಯದ ಫ್ಯಾಕ್ಟರಿ ಸರ್ಕಲ್ ಸಮೀಪ ಸಂಚರಿಸುತ್ತಿದ್ದ ರೈಲಿನ ಮೇಲೆ ಮರ ಮುರಿದು ಬಿದ್ದು, ಲೋಕೋ ಪೈಲೆಟ್ ಎನ್.ಎಸ್.ಪ್ರಶಾಂತ್​ ತಲೆಗೆ ಗಾಯವಾಗಿದ್ದು, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆಮೋ ರೈಲು ಸೋಮವಾರ ಸಂಜೆ ಎಂದಿನಂತೆ ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿತ್ತು. ಈ ಸಂದರ್ಭ ಫ್ಯಾಕ್ಟರಿ ವೃತ್ತದ ಬಳಿ ಬರುತ್ತಿದ್ದಂತೆ ಮರ ರೈಲಿನ ಮುಂಭಾಗಕ್ಕೆ ಹೊಡೆದು ರೈಲಿನ ಕಿಟಕಿ ಗಾಜುಗಳು ಒಡೆದು ಲೋಕೋ ಪೈಲೆಟ್‌ನ ತಲೆಗೆ ಗಾಯವಾಗಿದೆ. ತಕ್ಷಣ ರೈಲು ನಿಲ್ಲಿಸಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೊಲೀಸರು ಗಾಯಗೊಂಡ ಸಿಬ್ಬಂದಿಯನ್ನು ಮಂಡ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಂತರ 500ಕ್ಕೂ ಹೆಚ್ಚು ಪ್ರಯಾಣಿಕರನ್ನು ವಿಶ್ವಮಾನವ ಪ್ಯಾಸೆಂಜ‌ರ್ ರೈಲಿನಲ್ಲಿ ಮೈಸೂರಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಯಿತು. ಸುಮಾರು ಒಂದು ಗಂಟೆಯ ನಂತರ ಪ್ರಯಾಣಿಕರು ಬೇರೊಂದು ರೈಲಿನಲ್ಲಿ ಪ್ರಯಾಣ ಮುಂದುವರೆಸಿದರು.

More articles

Latest article