KPCC ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಎ.ಎನ್. ನಟರಾಜಗೌಡ ನೇಮಕ

Most read

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಶ್ರೀ ಎ.ಎನ್. ನಟರಾಜಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ, ರಾಜ್ಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾಗಿ ನಟರಾಜ್ ಗೌಡ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದರು.

ಇದುವರೆಗೆ ಕೆಪಿಸಿಸಿ ಪದವೀಧರ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ: ಆ‌ರ್.ಎಂ. ಕುಬೇರಪ್ಪ ಅವರ ಸೇವೆಯನ್ನು ಪಕ್ಷವು ಶ್ಲಾಘಿಸಿದ್ದಾರೆ.

ತಾವು ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಕೆಪಿಸಿಸಿಯ ಮಾರ್ಗದರ್ಶನದಲ್ಲಿ ಮತ್ತು ರಾಜ್ಯದ ನಾಯಕರ ಸಹಕಾರದೊಂದಿಗೆ ಪದವೀಧರ ವಿಭಾಗದ ಸಂಘಟನೆ ಬಲಪಡಿಸಲು ಮತ್ತು ಮೂಲಕ ಪಕ್ಷದ ಬಲವರ್ಧನೆಯಲ್ಲಿ ಕಾರ್ಯೋನ್ಮುಖರಾಗಬೇಕೆಂದು ಕೋರಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಹಾರೈಸುತ್ತೇನೆ ಎಂಧು ಡಿಸಿಎಂ ಶಿವಕುಮಾರ್‌ ಶುಭ ಹಾರೈಸಿದ್ದಾರೆ.

More articles

Latest article