ಹಿರಿಯ ಪತ್ರಕರ್ತ ಆರ್.‌ ಜಯಕುಮಾರ್‌ ಇನ್ನಿಲ್ಲ

Most read

ಬೆಂಗಳೂರು: ಹಿರಿಯ ಪತ್ರಕರ್ತ ಆರ್.‌ ಜಯಕುಮಾರ್‌ (64) ಬಹುಅಂಗಾಂಗ ವೈಫಲ್ಯದಿಂದ ಇಂದು ಸಾವಿಗೀಡಾಗಿದ್ದಾರೆ.

ಪತ್ನಿ, ಲೇಖಕಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೊಡಗಿನವರಾದ ಜಯಕುಮಾರ್, ಚಳವಳಿಗಳ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ ಮಾಡಿದ್ದರು.

ಜನಪರ ಹೋರಾಟದಲ್ಲಿ ಭಾಗವಹಿಸಿದ್ದ ಕಾಮ್ರೆಡ್ ಜಯಕುಮಾರ್ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು.

ಇಂದು ಸಂಜೆ ಅವರ ದೇಹವನ್ನು ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.

More articles

Latest article