ರಾಜಕೀಯ ಲಾಭಕ್ಕೆ ದರ್ಶನ್ರನ್ನು ಬಳಸಿಕೊಂಡ ಸುಮಲತಾ ಇವಾಗ ಮೌನವೇಕೆ : ನಟ ಚೇತನ್‌ ಪ್ರಶ್ನೆ

Most read

ದರ್ಶನ್‌ ನನ್ನ ಸ್ವಂತ ಮಗ ಎಂದಿದ್ದ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೌನ ವಹಿಸಿರುವುದು ಕುತೂಹಲಕ್ಕೆ ಕಾರಣವೇನು ಎಂದು ನಟ ಚೇತನ್‌ ಅಹಿಂಸ ಪ್ರಶ್ನಿಸಿದ್ದಾರೆ.

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿರುವ ಚೇತನ್, ದರ್ಶನ್ ನನ್ನನ್ನು ‘ಮದರ್ ಇಂಡಿಯಾ’ ಎಂದೇ ಕರೆಯೋದು ಎಂದು ಈ ಹಿಂದೆ ಸುಮಲತಾ ಅವರು ಬಹಿರಂಗವಾಗಿ ಹೇಳಿಕೊಂಡಿದ್ದರು. ದರ್ಶನ್ ನನ್ನ ಹಿರಿಯ ಮಗ ಎಂದೇ ಹೇಳಿಕೊಂಡಿದ್ದರು. ಆದರೆ ಇಂದು ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ದರ್ಶನ್ ಬಗ್ಗೆ ಎಲ್ಲೂ ಮಾತನಾಡಿಲ್ಲ. ಮಾತ್ರವಲ್ಲ ಎಲ್ಲೂ ಸುಮಲತಾ ಅವರು ಬಹಿರಂಗವಾಗಿ ಕಾಣಿಸಿಕೊಂಡೇ ಇಲ್ಲ ಎಂದು ಟೀಕಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಮತ್ತು ಕೊಲೆ ಆರೋಪದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಜನ ಸಂಗಡಿಗರು ಪರಪ್ಪನ ಅಗ್ರಹಾರಲ್ಲಿ ಜೈಲು ಸೇರಿದ್ದಾರೆ. ಆದರೆ ದರ್ಶನ್ ಆಪ್ತರಾಗಿ ಗುರುತಿಸಿಕೊಂಡಿರುವ ಯಾರೂ ಕೂಡ ಈವರೆಗೆ ಪತ್ರಿಕ್ರಿಯೆ ನೀಡದೇ ಅಂತರ ಕಾಯ್ದುಕೊಂಡಿದ್ದಾರೆ.

More articles

Latest article