ರೈತನನ್ನು ಅವಮಾನಿಸಿದ ಜಿ.ಟಿ.ಮಾಲ್ ಅನ್ನು​ ಒಂದು ವಾರ ಮುಚ್ಚಿಸುತ್ತೇವೆ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಘೋಷಣೆ

ಪಂಚೆ ಹಾಕಿದ ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.


ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ. ಸರ್ಕಾರದ ಕ್ರಮ ಕೈಗೊಳ್ಳಬಹುದು. ಹಾಗಾಗಿ 7 ದಿನ ಮಾಲ್ ಮುಚ್ಚಿಸುತ್ತೇವೆ, ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್‌, ಗ್ರಾಮೀಣ ಭಾಗದಿಂದ ಬಂದ ಯುವಕ ತಮ್ಮ ತಂದೆಯನ್ನು ಮಾಲ್‌ಗೆ ಕರೆದೊಯ್ದಾಗ ಅಲ್ಲಿ ಆ ರೈತನನ್ನು ಮಾಲ್‌ನೊಳಗೆ ಬಿಡಲಿಲ್ಲ. ಆ ರೈತ ಕರ್ನಾಟಕದ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದರು. ಪಂಚೆ ತೊಟ್ಟಿದ್ದಾರೆ ಎಂಬ ಕಾರಣಕ್ಕೆ ಒಳಬಿಟ್ಟಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಸರ್ಕಾರ ಮಾಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಎಲ್ಲಾ ಮಾಲ್​ಗಳಿಗೂ ಸಂದೇಶ ರವಾನಿಸಬೇಕು ಎಂದರು.

ಇದಕ್ಕೆ ಧ್ವನಿಗೂಡಿಸಿದ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ, ಮಾಲ್‌ ವಿರುದ್ಧ ಕಠಿಣ ಕ್ರಮ ಎಂದು ಹೇಳಿದರೆ ಆಗದು. ಒಂದು ವಾರಗಳ ವಿದ್ಯುತ್​ ಕಡಿತಗೊಳಿಸಿ, ಆಗ ತಕ್ಕ ಪಾಠ ಆಗುತ್ತದೆ. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿ ರೈತರ ಸಮವಸ್ತ್ರಕ್ಕೆ ಬೆಲೆ ಕೊಡದ ಮಾಲ್​ ವಿರುದ್ಧ ಕ್ರಮವಾಗಬೇಕು ಎಂದು ಆಗ್ರಹಿಸಿದರು.

ಅಲ್ಲದೆ ರಾಜ್ಯದ ಎಲ್ಲಾ ಕ್ಲಬ್‌ಗಳು, ಮಾಲ್‌ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದನ್ನು ಬಿಡಬೇಕು ಎಂದು ಅಶೋಕ್ ಪಟ್ಟಣ, ಬೈರತಿ ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ರು.

ಪಂಚೆ ಹಾಕಿದ ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.


ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ. ಸರ್ಕಾರದ ಕ್ರಮ ಕೈಗೊಳ್ಳಬಹುದು. ಹಾಗಾಗಿ 7 ದಿನ ಮಾಲ್ ಮುಚ್ಚಿಸುತ್ತೇವೆ, ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್‌, ಗ್ರಾಮೀಣ ಭಾಗದಿಂದ ಬಂದ ಯುವಕ ತಮ್ಮ ತಂದೆಯನ್ನು ಮಾಲ್‌ಗೆ ಕರೆದೊಯ್ದಾಗ ಅಲ್ಲಿ ಆ ರೈತನನ್ನು ಮಾಲ್‌ನೊಳಗೆ ಬಿಡಲಿಲ್ಲ. ಆ ರೈತ ಕರ್ನಾಟಕದ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದರು. ಪಂಚೆ ತೊಟ್ಟಿದ್ದಾರೆ ಎಂಬ ಕಾರಣಕ್ಕೆ ಒಳಬಿಟ್ಟಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಸರ್ಕಾರ ಮಾಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಎಲ್ಲಾ ಮಾಲ್​ಗಳಿಗೂ ಸಂದೇಶ ರವಾನಿಸಬೇಕು ಎಂದರು.

ಇದಕ್ಕೆ ಧ್ವನಿಗೂಡಿಸಿದ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ, ಮಾಲ್‌ ವಿರುದ್ಧ ಕಠಿಣ ಕ್ರಮ ಎಂದು ಹೇಳಿದರೆ ಆಗದು. ಒಂದು ವಾರಗಳ ವಿದ್ಯುತ್​ ಕಡಿತಗೊಳಿಸಿ, ಆಗ ತಕ್ಕ ಪಾಠ ಆಗುತ್ತದೆ. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿ ರೈತರ ಸಮವಸ್ತ್ರಕ್ಕೆ ಬೆಲೆ ಕೊಡದ ಮಾಲ್​ ವಿರುದ್ಧ ಕ್ರಮವಾಗಬೇಕು ಎಂದು ಆಗ್ರಹಿಸಿದರು.

ಅಲ್ಲದೆ ರಾಜ್ಯದ ಎಲ್ಲಾ ಕ್ಲಬ್‌ಗಳು, ಮಾಲ್‌ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದನ್ನು ಬಿಡಬೇಕು ಎಂದು ಅಶೋಕ್ ಪಟ್ಟಣ, ಬೈರತಿ ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ರು.

More articles

Latest article

Most read