ನಟ ದರ್ಶನ್‌ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿಎಂ ಸಿದ್ದರಾಮಯ್ಯ

Most read

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.

More articles

Latest article