ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಹೃದಯಾಘಾತದಿಂದ ನಿಧನ

ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ಜೋತಿಪುರ ನಿವಾಸದಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದ ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ.

ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ನಿಂತಿದ್ದರು. ಈ ಹಿಂದೆ ಬಿಜೆಪಿ ಸರ್ಕಾರ ವಿರುದ್ಧ 40% ಆರೋಪ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ಹೋರಾಡಿದ್ದರು. ಈ ವಿಚಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಹೊಡೆತ ನೀಡಿತ್ತು.

ಆದರೀಗ ಇವರ ಹಠಾತ್​ ಸಾವು ಗುತ್ತಿಗೆದಾರರಿಗೆ ಬೇಸರ ತರಿಸಿದೆ. ಕೆಂಪಣ್ಣ ಅವರ ಸಾವಿಗೆ ಅನೇಕರು ಕಂಬನಿ ಸುರಿಸಿದ್ದಾರೆ. ಜೊತೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ಜೋತಿಪುರ ನಿವಾಸದಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದ ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ.

ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ನಿಂತಿದ್ದರು. ಈ ಹಿಂದೆ ಬಿಜೆಪಿ ಸರ್ಕಾರ ವಿರುದ್ಧ 40% ಆರೋಪ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ಹೋರಾಡಿದ್ದರು. ಈ ವಿಚಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಹೊಡೆತ ನೀಡಿತ್ತು.

ಆದರೀಗ ಇವರ ಹಠಾತ್​ ಸಾವು ಗುತ್ತಿಗೆದಾರರಿಗೆ ಬೇಸರ ತರಿಸಿದೆ. ಕೆಂಪಣ್ಣ ಅವರ ಸಾವಿಗೆ ಅನೇಕರು ಕಂಬನಿ ಸುರಿಸಿದ್ದಾರೆ. ಜೊತೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

More articles

Latest article

Most read