ಬಳ್ಳಾರಿ ಜಿಲ್ಲೆಯಲ್ಲಿ ಮಳೆ ಆರ್ಭಟ: ಗಣಿ ಲಾರಿಗಳು ಭಾಗಶಃ ಜಲಾವೃತ

Most read

ಬಳ್ಳಾರಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಬಾರಿ ಮಳೆಯಾಗಿದ್ದು, ಮಳೆ ಹಬ್ಬರಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗಣಿ ಲಾರಿಗಳು ಭಾಗಶಃ ಜಲಾವೃತಗೊಂಡಿದೆ.

ಭಾರೀ ಮಳೆಯ ಪರಿಣಾಮ ಸಂಡೂರಿನ ಗಣಿ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆ ನೀರಿನಲ್ಲಿ ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆಯಾಗಿದೆ. ಲಾರಿಗಳು ಜಲಾವೃತಗೊಂಡ ಹಿನ್ನೆಲೆ ಇಡೀ ರಾತ್ರಿ ಚಾಲಕರು ಪರದಾಡಿದ್ದಾರೆ.

ಸಂಡೂರಿನ ನಂದಿಹಳ್ಳಿ ವಾಶಿಂಗ್ ಪ್ಲಾಂಟ್ ಬಳಿ ಮಳೆ ಅವಾಂತರಕ್ಕೆ ಲಾರಿ ಚಾಲಕರು ನಲುಗಿ ಹೋಗಿದ್ದಾರೆ. ಕುಮಾರಸ್ವಾಮಿ ಬೆಟ್ಟದಲ್ಲಿ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ.

More articles

Latest article