ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Most read

ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಮಾತಮಾಡಿದ ಅವರು, ನನ್ನ ಮತ್ತು ಶಿವಕುಮಾರ್‌ ಇಬ್ಬರೊಟ್ಟಿಗೂ ಕೆ.ಸಿ ವೇಣುಗೋಪಾಲ್ ಮಾತನಾಡಿದ್ದಾರೆ. ನೀವ್ಯಾರು ಇನ್ನುಮುಂದೆ ಸಭೆ ಸೇರುವುದು, ಮಾತನಾಡುವುದು, ಮಾಡಬಾರದು. ಮುಂದೆ ಅಂತಹ ಪರಿಸ್ಥಿತಿ ನಿರ್ಮಾಣವಾದರೆ ನೀವೆ ಜವಾಬ್ದಾರರು ಎಂದಿದ್ದಾರೆ.

ಯಾವ ಸಚಿವರು ಸಭೆ ಮಾಡ್ತಾರೆ? ಬಹಿರಂಗವಾಗಿ ಮಾತಾಡ್ತಾರೆ ಅವರಿಗೆ ಎಐಸಿಸಿಯಿಂದ ನೀವೆ ನೋಟಿಸ್ ನೀಡಿ. ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೆ ಸಚಿವ ಸ್ಥಾನದಿಂದ ವಜಾ ಮಾಡಿ. ಇವಿಷ್ಟು ನಿರ್ದೇಶನ ಎಐಸಿಸಿ ಅಧ್ಯಕ್ಷರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಬಂದಿದೆ. ಇದನ್ನ ಕೆ.ಸಿ ವೇಣುಗೋಪಾಲ್‌ ಹಾಗೂ ಸುರ್ಜೆವಾಲ ಇಬ್ಬರೂ ನನ್ನ ಗಮನಕ್ಕೆ ತಂದಿದ್ದಾರೆ. ನಿಮ್ಮ ಸಭೆ, ನಿಮ್ಮ ಮಾತು, ನಿಮ್ಮ ಜವಬ್ದಾರಿ. ಈ ವಿಚಾರದಲ್ಲಿ ಯಾವುದೂ ನನ್ನ ಕೈಯಲ್ಲಿ ಇಲ್ಲ ಎಂದು ಸಚಿವರಿಗೆ ನೇರವಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಸಭೆಯ ಆರಂಭದಲ್ಲಿ, ಮಾಜಿ ಸ್ಪೀಕರ್‌ ಕೆ.ಬಿ ಕೋಳಿವಾಡ ಅವರ ಮಾತಿನ ಬಗ್ಗೆ ಅವರ ಮಗ ಶಾಸಕ ಪ್ರಕಾಶ್ ಕೋಳಿವಾಡ ಕ್ಷಮೆ ಕೇಳಿದರು. ಬಳಿಕ ಸಿಎಂ ಅದು ಮುಗಿದ ಅಧ್ಯಾಯ, ಆದ್ರೆ ಸಚಿವರು ನೀವೇ ಮಾತಾನಾಡಿದರೆ ಹೇಗೆ? ಎಂದು ಪ್ರಶ್ನೆ ಮಾಡಿದರು.

More articles

Latest article