ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ: ಅ.22ಕ್ಕೆ ವಿಚಾರಣೆ

Most read

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ 57ಮೇ ಸಿಸಿಎಚ್‌ ಕೋರ್ಟ್‌ ಅಕ್ಟೋಬರ್‌ 14ರಂದು ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ನಟ ದರ್ಶನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದು, ಇದೀಗ ಅಕ್ಟೋಬರ್ 22ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಒಪ್ಪಿಗೆ ನೀಡಿದೆ.

ನಟ ದರ್ಶನ್‌ ಪರ ವಾದ ಮಂಡನೆ ಮಾಡಲಿರುವ ವಕೀಲ ಎಸ್.ಸುನೀಲ್ ಅವರು, ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಪೀಠಕ್ಕೆ ಜಾಮೀನು ಅರ್ಜಿಯನ್ನು ಈಗಾಗಲೇ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

More articles

Latest article