ಹಾವೇರಿಯಲ್ಲಿ ಭಾರಿ ಮಳೆ: ನೀರಿನಲ್ಲಿ ಸಿಲುಕಿದ್ದ ಪಂಡರಾಪುರಕ್ಕೆ ತೆರಳುತ್ತಿದ್ದ ಭಕ್ತರ ರಕ್ಷಣೆ

Most read

ಹಾವೇರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಪಂಡಾರಪುರಕ್ಕೆ ತೆರಳುತ್ತಿದ್ದ 30 ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬರದೂರು ಗ್ರಾಮದ ಬಳಿ ನಡೆದಿದ್ದು, ಭಕ್ತರು ನಡು ನೀರಿನಲ್ಲಿ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಪಂಡರಾಪುರಕ್ಕೆ ತೆರಳುತ್ತಿದ್ದ ಹಾನಗಲ್ ತಾಲೂಕಿನ ಅಲ್ಲಾಪುರ ಗ್ರಾಮದ 30 ಭಕ್ತರು ಭಾನುವಾರ ತಡರಾತ್ರಿ ಬರದೂರಿನ ಹೊರವಲಯದಲ್ಲಿರುವ ರಾಮಲಿಂಗ ಮಠದಲ್ಲಿ ವಾಸ್ತವ್ಯ ಹೂಡಿದ್ದರು. ತಡರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮಠ ಜಲಾವೃತಗೊಂಡು ಭಕ್ತರು ನೀರಿನಲ್ಲಿ ಸಿಲುಕಿಕೊಂಡಿದ್ದರು.

ಸ್ಥಳಕ್ಕೆ ಹಾವೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಭಕ್ತರನ್ನು ರಕ್ಷಿಸಿದ್ದಾರೆ.

More articles

Latest article