ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧೆ, ಇಂದು ಸಂಜೆ ಶಾಸಕ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ!

Most read

ಬಿಜೆಪಿಯಿಂದಲೇ ನಿಲ್ಲಬೇಕು ಎಂಬ ಆಸೆ ಇದೆ. ಜೆಡಿಎಸ್ ನಿಂದ ನಿಲ್ಲಲ್ಲ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಇದರ ನಡುವೆ ಅವರು ಇಂದು ಸಂಜೆ ತನ್ನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದು ತಿಳಿದು ಬಂದಿದೆ.

ಇಂದು ಮಾತನಾಡಿದ ಅವರು, ಕುಮಾರಸ್ವಾಮಿ ಮನಸ್ಸಿನಲ್ಲಿ ಅವರ ಮಗನಿಗೆ ಟಿಕೆಟ್ ಕೊಡಬೇಕು ಎಂದು ಆಸೆ ಇದೆ. ಅವರ ಮನಸಲ್ಲೇ ಆ ತರಹ ಇದ್ದರೆ ಏನು ಮಾಡೋದಕ್ಕೆ ಆಗುತ್ತದೆ ಎಂದು ಪ್ರಶ್ನಿಸಿದರು.

ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದು ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಈ ಸಂದರ್ಭದಲ್ಲಿ ಯಡಿಯೂರಪ್ಪನವರು ಈ ಹೇಳಿಕೆ ಕೊಡುವ ಅಗತ್ಯವಿರಲಿಲ್ಲ. ಅವರೇ ತೀರ್ಮಾನ ಮಾಡಬೇಕು. ಆದರೆ ಕುಮಾರಸ್ವಾಮಿ ಅವರಿಗೆ ದೊಡ್ಡ ಮನಸು ಇದ್ದಿದ್ದರೆ ಅನುಕೂಲ ಆಗುತ್ತಿತ್ತು. ಅವರು ಉದ್ದೇಶಪೂರ್ವಕ ಈ ಹೇಳಿಕೆ ಕೊಟ್ಟಿದ್ದಾರೆ. ಇದರ ಹಿಂದೆ ದುರುದ್ದೇಶ ಇದೆ ಎಂದು ಯಡಿಯೂರಪ್ಪ ವಿರುದ್ಧ ಕಿಡಿಕಾರಿದರು.

ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ ಎನ್ನಲಾಗಿದೆ.

More articles

Latest article