ಮಳೆಯ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕಿದೆ : ಸಿಎಂ ಸಿದ್ದರಾಮಯ್ಯ

Most read

125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನಾಂಕ 170 ಮಿ.ಮೀ ಮಳೆ ಬಿದಿದ್ದೆ. ಇದರಿಂದ ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಕಡೆ ಸಾಕಷ್ಟು ಮಳೆಯಾಗಿದ್ದು ಬೆಂಗಳೂರಿನಲ್ಲೂ ಸಹ ಪ್ರಮಾನಕ್ಕಿಂತ ಅಧಿಕವಾಗಿ ಮಳೆಯಾಗಿದೆ. ತಗ್ಗುಪ್ರದೇಶಗಳು, ರಸ್ತೆಗಳು, ಅರ್ಪಾಟ್‌ಮೆಂಟ್‌ಗಳು ಮುಳುಗಡೆ ಆಗಿದ್ದು, ಬೆಂಗಳೂರಿಗರಿಗೆ ಸಾಕಷ್ಟು ತೊಂದರೆಯುಂಟಾಯಿಗಿದೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇದೆ. ಈ ಭಾಗದ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಗಳನ್ನು ಮಾಡಲಾಗುತ್ತಿದೆʼ ಎಂದರು.

ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ತೆರವು ಮಾಡಿಸಬೇಕೆಂದು ಹಿಂದೆಯೂ ಸೂಚನೆ ನೀಡಿದ್ದೆ ಈಗಲೂ ಸೂಚನೆ ನೀಡಿದ್ದೇನೆ ಎಂದರು.

More articles

Latest article