ಜಾತಿ ಗಣತಿ ಬಗ್ಗೆ ಮಾತನಾಡುತ್ತಿರುವ ಪೇಜಾವರ ಶ್ರೀ ಪುಡಿ ರಾಜಕಾರಣಿ: ಬಿ‌.ಕೆ. ಹರಿಪ್ರಸಾದ್​​

Most read

ಜಾತಿ ಗಣತಿ ವಿಚಾರವಾಗಿ ಹೇಳಿಕೆ ನೀಡಿದ್ದ ಪೇಜಾವರ ಶ್ರೀ ವಿರುದ್ಧ ವಿಧಾನ ಪರಿಷತ್​ ಸದಸ್ಯ ಬಿಕೆ ಹರಿಪ್ರಸಾದ್, ಜಾತಿ ಗಣತಿ ಬಗ್ಗೆ ಮಾತನಾಡುತ್ತಿರುವ ಪೇಜಾವರ ಶ್ರೀ ಪುಡಿ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಾತಿ ಗಣತಿ ಕುರಿತು ಹೇಳಿಕೆ ನೀಡಿರುವ ಪೇಜಾವರ ಶ್ರೀಗಳ ವಿರುದ್ಧ ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​ “ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಈಗಿನ ಸ್ವಾಮೀಜಿ ಅವರು ಅಯೋಧ್ಯೆಯಿಂದ ಹಿಡಿದು ಎಲ್ಲ ವಿಷಯಗಳ ಬಗ್ಗೆ ಹೇಳಿಕೆ ನೀಡುತ್ತಿರುತ್ತಾರೆ. ಜಾತಿ ಗಣತಿ ಬಗ್ಗೆ ಮಾತನಾಡುವ ಸ್ವಾಮೀಜಿ ಅವರು ತಮ್ಮ ಮಠದಲ್ಲಿ ಪಂಕ್ತಿಭೋಜನ ಹಾಗೂ ಮಡೆಸ್ನಾನ ಉತ್ತೇಜನ ನೀಡುತ್ತಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದರು.

ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​ ಹೇಳಿಕೆಗೆ ಪೇಜಾವರ ಶ್ರೀಗಳು ಉತ್ತರಿಸಿದ್ದು, ನಾವು ಪುಡಿ ರಾಜಕಾರಣ ಮಾಡುತ್ತಿದ್ದೇವೆ ಎನ್ನುತ್ತಾರೆ. ಹಾಗಾದರೆ ಇದು ಪ್ರಜಾಪ್ರಭುತ್ವ ರಾಷ್ಟ್ರ ಹೌದೋ ಅಲ್ವೋ ಹೇಳಿ. ಹೌದು ಅಂತಾದ್ರೆ ಮಾತನಾಡುವ ಹಕ್ಕಿದೆ. ಹೀಗಿರುವಾಗ ಕಾವಿ ತೆಗೆದಿಟ್ಟು ಬಂದರೆ ಉತ್ತರ ಕೊಡುತ್ತೇವೆ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

More articles

Latest article