ಕಾರು ಹರಿದು ಯುವಕ ಸಾವು

ಬೆಂಗಳೂರು: ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟಿದ್ದ ಯುವಕನ ಮೇಲೆ ಕಾರು ಹರಿದು ಸ್ಥಳದಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬಾಗೇಪಲ್ಲಿ ಮೂಲದ 20 ವರ್ಷದ ಶಶಿಕುಮಾರ್ ಮೃತ ಯುವಕ. ಶಶಿಕುಮಾರ್ ಪೀಣ್ಯದ ಕಾರ್ಖಾನೆಯೊಂದರಲ್ಲಿ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದರು.

ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಕಾರಣ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದರು. ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕಾರು ಯುವಕನ ಮೇಲೆ ಹರಿದಿತ್ತು. ಪರಿಣಾಮ ಶಶಿಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರನ್ನು ಚಾಲಕ ನಿಲ್ಲಿಸದೆ ತೆರಳಿದ್ದಾನೆ. ಆ ಮಾರ್ಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ. ಕಾರು ಬಿಳಿ ಬಣ್ಣದ್ದು ಎಂದು ತಿಳಿದು ಬಂದಿದೆ. ಆರೋಪಿಯ ಪತ್ತೆಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕಲಾಸಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟಿದ್ದ ಯುವಕನ ಮೇಲೆ ಕಾರು ಹರಿದು ಸ್ಥಳದಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬಾಗೇಪಲ್ಲಿ ಮೂಲದ 20 ವರ್ಷದ ಶಶಿಕುಮಾರ್ ಮೃತ ಯುವಕ. ಶಶಿಕುಮಾರ್ ಪೀಣ್ಯದ ಕಾರ್ಖಾನೆಯೊಂದರಲ್ಲಿ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದರು.

ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಕಾರಣ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದರು. ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕಾರು ಯುವಕನ ಮೇಲೆ ಹರಿದಿತ್ತು. ಪರಿಣಾಮ ಶಶಿಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರನ್ನು ಚಾಲಕ ನಿಲ್ಲಿಸದೆ ತೆರಳಿದ್ದಾನೆ. ಆ ಮಾರ್ಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ. ಕಾರು ಬಿಳಿ ಬಣ್ಣದ್ದು ಎಂದು ತಿಳಿದು ಬಂದಿದೆ. ಆರೋಪಿಯ ಪತ್ತೆಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕಲಾಸಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More articles

Latest article

Most read