ನವದೆಹಲಿ: ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಮತ್ತು ಹೇಗೆ ಎದುರಿಸಬೇಕು ಎಂಬುದನ್ನು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಕುಳಿತು ನಿರ್ಧರಿಸಬೇಕು. ಆ ಮೂಲಕ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸಲಹೆ ನೀಡಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿನ ಗೊಂದಲವು ಬಿಜೆಪಿಗೆ ಲಾಭ ಮಾಡಿಕೊಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷವು ಒಮ್ಮತದಿಂದ ಎಲ್ಲರನ್ನು ಮುನ್ನೆಡೆಸಲು ಪ್ರಯತ್ನಿಸುತ್ತದೆ. ಇದೇ ಕೆಲವೊಮ್ಮೆ ಕಾಂಗ್ರೆಸ್ಗೆ ಮುಳುವಾಗುತ್ತದೆ. ಬಿಹಾರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ನಿರೀಕ್ಷಿಸಿದ ಸ್ಥಾನಗಳನ್ನು ಗೆಲ್ಲದಿದ್ದಾಗ ಕಾಂಗ್ರೆಸ್ನಿಂದಲೇ ನಾವು ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಆರ್ಜೆಡಿ ಹೇಳಿತ್ತು. ಕಾಂಗ್ರೆಸ್ ವಿರುದ್ಧ ಗೋವಾ, ಹರಿಯಾಣ, ಗುಜರಾತ್ ಮತ್ತು ಇತರ ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದಾಗ ಅರವಿಂದ ಕೇಜ್ರಿವಾಲ್ ಅವರಿಗೂ ಇದೇ ಪ್ರಶ್ನೆ ಕೇಳಬೇಕಿತ್ತು ಎಂದು ಹೇಳಿದರು.
‘ತ್ತರ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಮೈತ್ರಿ ಯಶಸ್ಸಿಯಾಗಿತ್ತು. ತಮಿಳುನಾಡಿನಲ್ಲಿಯೂ ಇದು ಯಶಸ್ಸು ಕಂಡಿತ್ತು. ಹೀಗಾಗಿ ಹೇಗೆ ಮುಂದುವರಿಯಬೇಕು ಎಂಬುದನ್ನು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಚರ್ಚಿಸಬೇಕು ಎಂದು ಸಲಹೆ ನೀಡಿದರು. ಚುನಾವಣೆಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ಎಲ್ಲರೂ ಸೇರಿ ನಿರ್ಧರಿಸಬೇಕು. ಇಲ್ಲವಾದರೆ ಬಿಜೆಪಿ ಇದರ ಲಾಭ ಪಡೆದುಕೊಳ್ಳುತ್ತದೆ ಎಂದೂ ಸಿಬಲ್ ಎಚ್ಚರಿಸಿದರು.