ಬ್ಯಾನ್ ರಮ್ಮಿ ಎಂದು ಸೀರೆಯಲ್ಲಿ ನೇಯ್ದು ಮನವಿ ಮಾಡಿಕೊಂಡ ಇಳಕಲ್ ನ ಮೇಘರಾಜ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಮೇಘರಾಜ್ ಗುದ್ದಟ್ಟಿ ಅವರು. ”ಬ್ಯಾನ್ ರಮ್ಮಿ ಮತ್ತು ಡ್ರೀಮ್ 11” ಎಂದು ಇಳಕಲ್ ಸೀರೆ ಮೇಲೆ ನೇಯ್ದು ಆ ಸೀರೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ. ಆನ್‌ ಲೈನ್‌ ರಮ್ಮಿಗೆ ನಿಷೇಧ ಹೇರುವಂತೆ ವಿನೂತನ ಶೈಲಿಯಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಆನ್ ಲೈನ್ ಜೂಜಾಟದಿಂದ ಅಸಂಖ್ಯಾತ ಕುಟುಂಬಗಳು ಬೀದಿಗೆ ಬಿದ್ದಿವೆ. ಅನೇಕ ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ, ಈ ಜೂಜಾಟಕ್ಕೆ ನಿಷೇಧ ಹೇರಬೇಕು ಎಂದು ವಿನೂತನ ಶೈಲಿಯಲ್ಲಿ ಮನವಿ ಮಾಡಿಕೊಂಡಿದ್ದೇನೆ ಎಂದು ಮೇಘರಾಜ್ ಹೇಳಿದ್ದಾರೆ.

ಮೇಘರಾಜ್ ಈ ಹಿಂದೆ ಇಳಕಲ್ ಸೀರೆಯಲ್ಲಿ ಸೂರ್ಯಯಾನ-3 ಯಶಸ್ವಿಯಾದಾಗ ವಿಜ್ಞಾನಿಗಳಿಗೆ ಶುಭಾಶಯ ಎಂದು ಸೀರೆಯಲ್ಲಿ ನೇಯುವ ಮೂಲಕ ಗಮ ಸೆಳೆದಿದ್ದರು. ಪುನೀತ್ ರಾಜಕುಮಾರ್ಅವರ ಕೊನೆಯ ಚಿತ್ರ ಜೇಮ್ಸ್ ಶತದಿನ ಆಚರಿಸಲಿ ಎಂದೂ ಸೀರೆಯಲ್ಲಿ ನೇಯ್ದು ಶುಭಹಾರೈಸಿದ್ದರು. ಕಾಂತಾರ ಚಿತ್ರಕ್ಕೆ ಆಸ್ಕರ್ ಅವಾರ್ಡ್ ಸಿಗಲಿ ಎಂದು ಸೀರೆಯಲ್ಲಿ ನೇಯ್ದು ಗಮನ ಸೆಳೆದಿದ್ದರು.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಮೇಘರಾಜ್ ಗುದ್ದಟ್ಟಿ ಅವರು. ”ಬ್ಯಾನ್ ರಮ್ಮಿ ಮತ್ತು ಡ್ರೀಮ್ 11” ಎಂದು ಇಳಕಲ್ ಸೀರೆ ಮೇಲೆ ನೇಯ್ದು ಆ ಸೀರೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ. ಆನ್‌ ಲೈನ್‌ ರಮ್ಮಿಗೆ ನಿಷೇಧ ಹೇರುವಂತೆ ವಿನೂತನ ಶೈಲಿಯಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ. ಆನ್ ಲೈನ್ ಜೂಜಾಟದಿಂದ ಅಸಂಖ್ಯಾತ ಕುಟುಂಬಗಳು ಬೀದಿಗೆ ಬಿದ್ದಿವೆ. ಅನೇಕ ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ, ಈ ಜೂಜಾಟಕ್ಕೆ ನಿಷೇಧ ಹೇರಬೇಕು ಎಂದು ವಿನೂತನ ಶೈಲಿಯಲ್ಲಿ ಮನವಿ ಮಾಡಿಕೊಂಡಿದ್ದೇನೆ ಎಂದು ಮೇಘರಾಜ್ ಹೇಳಿದ್ದಾರೆ.

ಮೇಘರಾಜ್ ಈ ಹಿಂದೆ ಇಳಕಲ್ ಸೀರೆಯಲ್ಲಿ ಸೂರ್ಯಯಾನ-3 ಯಶಸ್ವಿಯಾದಾಗ ವಿಜ್ಞಾನಿಗಳಿಗೆ ಶುಭಾಶಯ ಎಂದು ಸೀರೆಯಲ್ಲಿ ನೇಯುವ ಮೂಲಕ ಗಮ ಸೆಳೆದಿದ್ದರು. ಪುನೀತ್ ರಾಜಕುಮಾರ್ಅವರ ಕೊನೆಯ ಚಿತ್ರ ಜೇಮ್ಸ್ ಶತದಿನ ಆಚರಿಸಲಿ ಎಂದೂ ಸೀರೆಯಲ್ಲಿ ನೇಯ್ದು ಶುಭಹಾರೈಸಿದ್ದರು. ಕಾಂತಾರ ಚಿತ್ರಕ್ಕೆ ಆಸ್ಕರ್ ಅವಾರ್ಡ್ ಸಿಗಲಿ ಎಂದು ಸೀರೆಯಲ್ಲಿ ನೇಯ್ದು ಗಮನ ಸೆಳೆದಿದ್ದರು.

More articles

Latest article

Most read