ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಗ್ರಾಮದ ಜೆಜಿ ಹಳ್ಳಿ ಸಮೀಪ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪರಿಚಿತ ಬೈಕ್ ಡಿಕ್ಕಿ ಹೊಡೆದಿದ್ದು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ರುದ್ರಪ್ಪ ಲಮಾಣಿ ಅವರು, ಮೂತ್ರ ವಿಸರ್ಜನೆಗೆಂದು ತಮ್ಮ ಕಾರಿನಿಂದ ಇಳಿದಾಗ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸಡನ್ ಆಗಿ ಬಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿಯವರ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಹಿರಿಯೂರಲ್ಲಿ ಚಿಕಿತ್ಸೆ ನೀಡಿ ಆ ನಂತರ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.