ಬೆಂಗಳೂರಿಗೆ ಬಂದಿಳಿದ ಆರ್ ಸಿಬಿ ತಂಡ; ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದನೆ

Most read

ಬೆಂಗಳೂರು:  ಐಪಿಎಲ್ 18ನೇ ಆವೃತ್ತಿಯಲ್ಲಿ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಬಂದಿಳಿದಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಆಟಗಾರರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಸ್ವಾಗತಿಸಿದರು. ಆರ್‌ ಸಿಬಿ ತಂಡವನ್ನು ರಜತ್ ಪಟಿದಾರ್ ಮುನ್ನೆಡೆಸಿದ್ದರು.

ಆರ್‌ ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇಂದು ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆಯ ಐಪಿಎಲ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ತವರೂರಿಗೆ ಆಗಮಿಸುತ್ತಿರುವ ಕರ್ನಾಟಕದ ಹೆಮ್ಮೆಯ ಆರ್‌ಸಿಬಿ ತಂಡವನ್ನು ಸಮಸ್ತ ಕನ್ನಡಿಗರ ಪರವಾಗಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಿ, ಸನ್ಮಾನಿಸಲಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ‌ ವಿಜಯೋತ್ಸವ ಕಾರ್ಯಕ್ರಮ ಜರುಗಲಿದೆ.

More articles

Latest article