ಕಾಲ್ತುಳಿತ ಪ್ರಕರಣ:RCB ಮಾರುಕಟ್ಟೆ ಮುಖ್ಯಸ್ಥ ನಿಖಿಲ್‌ ಸೋಸಲೆ, DNA ಸಿಬ್ಬಂದಿ ಸೇರಿ ನಾಲ್ವರ ಬಂಧನ;​​​​​​​ ನಿಖಿಲ್ ಯಾರು ಗೊತ್ತೇ?

Most read

ಬೆಂಗಳೂರು: ಆರ್ ಸಿ ಬಿ  ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್ ಸೋಸಲೆ, ಡಿ ಎನ್​ ಎ ಮ್ಯಾನೇಜ್​ ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್‌ ಮತ್ತು ನಿಖಿಲ್‌ ಎಂಬವರನ್ನು ಬಂಧಿಸಲಾಗಿದೆ. ಇವರು ಮುಂಬೈಗೆ ಹಾರಲು ಯತ್ನಿಸುತ್ತಿದ್ದಾಗ ಕೆಂಪೇಗೌಡ ಅಂತಾರಷ್ಟ್ರೀಯ  ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ನಿಖಿಲ್‌ ಕ್ರೀಡೆ ಮತ್ತು ಮದ್ಯ ತಯಾರಿಕಾ ಉದ್ಯಮಲ್ಲಿ 15 ವರ್ಷಗಳ ಅನುಭವ ಹೊಂದಿದ್ದಾನೆ. ಕ್ರಿಕೆಟ್‌ ಪಂದ್ಯಗಳಲ್ಲಿ ಈತ ಕ್ರಿಕೆಟ್‌ ಆಟಗಾರರ ಜತೆ ಕಾಣಿಸಿಕೊಳ್ಳುತ್ತಿರುತ್ತಾನೆ. 2012ರಿಂದ ಆರ್‌ ಸಿಬಿ ಜತೆ ಗುರುತಿಸಿಕೊಂಡಿದ್ದು ಕೆಲಸ ಮಾಡುತ್ತಿದ್ದಾನೆ. ಆರ್‌ ಸಿಬಿಯ ಪ್ರಧಾನ ಪ್ರಾಯೋಜಕತ್ವ ಹೊಂದಿರುವ ಡಿಯಾಗಿಯೋ ಇಂಡಿಯಾ ಕಂಪನಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥನಾಗಿ 2023ರಿಂದ ಕೆಲಸ ಮಾಡುತ್ತಿದ್ದಾನೆ.

ಈ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.  ಸಿಸಿಬಿ ಡಿಸಿಪಿ ಅಕ್ಷಯ್ ಎಂ. ನೇತೃತ್ವದಲ್ಲಿ ಇದೀಗ ಕಬ್ಬನ್ ಪಾರ್ಕ್ ಠಾಣೆಯಲ್ಲಿ ನಾಲ್ವರ ವಿಚಾರಣೆ ನಡೆಸಲಾಗಿದೆ. ಪೊಲೀಸರು ಅನುಮತಿ ನಿರಾಕರಿಸಿದ್ದರೂ ಉಚಿತ ಪಾಸ್​ ಸಂಬಂಧ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದು ಏಕೆ, ಈ ಪೋಸ್ಟ್‌ ಹಾಕಲು ನಿಮಗೆ ಹೇಳಿದ್ದು ಯಾರು?  ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಿಗದಿ ಮಾಡಿಕೊಂಡಿದ್ದು ಯಾವಾಗ? ವಿಕ್ಟರಿ ಪರೇಡ್ ಕುರಿತು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದು ಏಕೆ? ಟಿಕೆಟ್ ವಿಚಾರದಲ್ಲಿ ಗೊಂದಲ ಆಗಿದ್ದು ಏಕೆ? ಮೊದಲಾದ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದು ಬಂದಿದೆ.

More articles

Latest article