ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ ಸಂಭವಿಸಿ 24ಗಂಟೆ ಕಳೆಯುವುಕ್ಕೂ ಮುನ್ನವೇ ಥಾಯ್ಲೆಂಡ್ ನ ಫುಕೆಟ್ ದ್ವೀಪದಿಂದ ದೆಹಲಿ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನದ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಇದೀಗ ವಿಮಾನ AI- 379 ತುರ್ತು ಭೂಸ್ಪರ್ಶ ಮಾಡಿದ್ದು, ವಿಮಾನವನ್ನು ತಪಾಸಣೆ ಮಾಡಲಾಗಿದೆ. ಈ ವಿಮಾನದಲ್ಲಿ 156 ಪ್ರಯಾಣಿಕರಿದ್ದರು.
ನಂತರ ಏರ್ ಇಂಡಿಯಾ ವಿಮಾನ ಸಿಬ್ಬಂದಿ ವಿಮಾನದಿಂದ ಪ್ರಯಾಣಿಕರನ್ನು ಹೊರಕ್ಕೆ ಕಳುಹಿಸಿ ವಿಮಾನದ ತಪಾಸಣೆ ನಡೆಸಿದೆ. ಪ್ರಾಥಮಿಕ ಶೋಧದ ನಂತರ ಏರ್ ಇಂಡಿಯಾ ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. . ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಯಾರೂ ಆತಂಕಪಡಬೇಕಿಲ್ಲ ಎಂದು ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿತ್ತು.
ಇಂದು ಬೆಳಗ್ಗೆ 9:30 ಕ್ಕೆ ಏರ್ ಇಂಡಿಯಾ ವಿಮಾನ ಫುಕೆಟ್ ವಿಮಾನ ನಿಲ್ದಾಣದಿಂದ ಭಾರತದ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ್ಟಿತ್ತು.