ಸಾಮಾಜಿಕ ಮಾಧ್ಯಮಗಳ ಮೇಲೆ ಕಟ್ಟೆಚ್ಚರ ವಹಿಸಲು ಬೆಂಗಳೂರು ಪೊಲೀಸ್‌ ಆಯುಕ್ತರ ಸೂಚನೆ

Most read

ಬೆಂಗಳೂರು: ಶಾಂತಿಭಂಗ ಉಂಟು ಮಾಡುವ ಹಾಗೂ ಘರ್ಷಣೆಗೆ ಕಾರಣರಾಗುವವರ ವಿರುದ್ಧ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್‌ ಸಿಂಗ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ ಕಮಿಷನರ್‌ ಕಚೇರಿಯಲ್ಲಿ ನಡೆದ ‘ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣಾ ದಳ’ದ ಸಭೆಯಲ್ಲಿ ಅವರು ಮಾತನಾಡಿದರು.

ಅಪರಾಧ ವಿಭಾಗದ ಸಿಬ್ಬಂದಿ, ಠಾಣೆಯ ಗುಪ್ತವಾರ್ತೆ ಸಿಬ್ಬಂದಿ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲು ನೇಮಿಸಲಾಗಿರುವ ಸಿಬ್ಬಂದಿ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಸುಳ್ಳು ಮಾಹಿತಿ ಎನ್ನವುದು ತಿಳಿದು ಬರುತ್ತಿದ್ದಂತೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಕಾನೂನು ಬಾಹಿರ ಕೃತ್ಯ, ಸುಳ್ಳು ಮಾಹಿತಿ ಹರಡುವುದು, ದ್ವೇಷ ಭಾಷಣ, ಸುಳ್ಳು ಮಾಹಿತಿಯಿಂದ ಕೋಮು ಸಂಘರ್ಷಕ್ಕೆ ಕಾರಣವಾಗುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದೂ ಸೂಚಿಸಿದರು.

ಇನ್‌ಸ್ಟಾಗ್ರಾಂ, ‘ಎಕ್ಸ್‌’ ಖಾತೆ, ಫೇಸ್‌ಬುಕ್‌ ಮೇಲೆ ಕಣ್ಗಾವಲು ಇಡಬೇಕು. ಕ್ಷಣ ಕ್ಷಣದ ಮಾಹಿತಿಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು. ನಗರ ಕಮಿಷನರೇಟ್‌ ವ್ಯಾಪ್ತಿಯ ಎಲ್ಲ ಪೊಲೀಸ್‌ ಠಾಣೆಗಳ ಸಾಮಾಜಿಕ ಜಾಲತಾಣಗಳ ನಿಗಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಸಭೆಯಲ್ಲಿ ಭಾಗವಹಿಸಿದ್ದರು.

More articles

Latest article