ಪ್ರೊ.ದೊಡ್ಡ ರಂಗೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ; ವೈದ್ಯಕೀಯ ವೆಚ್ಚ ಭರಿಸುವುದಾಗಿ ಭರವಸೆ

Most read

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್‌ ಮಾಜಿ ಸದಸ್ಯ ಪ್ರೊ. ದೊಡ್ಡ ರಂಗೇಗೌಡ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.

 ಆಸ್ಪತ್ರೆಯ ವೈದ್ಯರಿಂದ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವ ಶಿವರಾಜ ತಂಗಡಗಿ ಅವರು ಮುಖ್ಯಮಂತ್ರಿಗಳ ಆದೇಶದಂತೆ ಅವರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದರು.

ಪ್ರೊ.ದೊಡ್ಡ ರಂಗೇಗೌಡರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ ಸಚಿವರು ಅವರ ಆರೋಗ್ಯದ ಮಾಹಿತಿ ಪಡೆದುಕೊಂಡು ಧೈರ್ಯ ತುಂಬಿದರು. .ಪ್ರೊ. ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲ ರೀತಿಯ ನೆರವನ್ನು ನೀಡುವುದಾಗಿ ತಿಳಿಸಿದರು.

More articles

Latest article