ಒಡಿಶಾದ ಪುರಿಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮೋಹನ್ ಚರಣ್ ಮಾಜ್ಹಿ ಹಾಗೂ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದ್ರನ್ ರಾಜೀನಾಮೆ ನೀಡಬೇಕು ಎಂದು ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ. ಮೃತರ ಕುಟುಂಬಕ್ಕೆ ರೂ.50 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ನೀಡಬೇಕು ಎಂದೂ ಆಗ್ರಹಪಡಿಸಿದೆ.
ಪುರಿಯ ಶ್ರೀ ಗುಂಡಿಚಾ ದೇಗುಲದ ಬಳಿಕ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದರು. ದೇಗುಲ ರಥ ಯಾತ್ರೆಯ ಅಂಗವಾಗಿ ಕಾರ್ಯಕ್ರಮಗಳು ನಡೆಯುತ್ತಿದ್ದವು. ದೇಗುಲದ ಮುಂಭಾದಲ್ಲಿ ನಿಲ್ಲಿಸಿದ್ದ ರಥದ ಬಳಿಕ ಮುಂಜಾನೆ 4.20ರ ಸುಮಾರಿಗೆ ಸಾವಿರಾರು ಮಂದಿ ಸೇರಿದ್ದರಿಂದ ಈ ದುರಂತ ಸಂಭವಿಸಿತ್ತು.
ಸರ್ಕಾರದ ಅಸಮರ್ಪಕ ನಿರ್ವಹಣೆಯಿಂದ ಕಾಲ್ತುಳಿತ ಸಂಭವಿಸಿದ್ದು, ಹಾಲಿ ಜಿಲ್ಲಾ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಅಭಿವೃದ್ಧಿ ಆಯುಕ್ತರಿಂದ ತನಿಖೆ ನಡೆಸುವ ಸರ್ಕಾರ ನಿರ್ಧಾರವನ್ನು ಕಾಂಗ್ರೆಸ್ ಒಪ್ಪಿಕೊಂಡಿಲ್ಲ. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರಿಚಂದ್ರನ್ ನೇತೃತ್ವದ ಸತ್ಯಶೋಧನಾ ಸಮಿತಿ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ತಂಡ ಭೇಟಿ ಮಾಡಿ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿದೆ.