ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ 12ರ ವರೆಗೆ ವಿಸ್ತರಿಸಿದ ಬೆನ್ನಲ್ಲೇ ದಸರಾ ರಜೆ ಅವಧಿಯನ್ನು ವಿಸ್ತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.
ಸೆಪ್ಟಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ದಸರಾ ರಜೆ ನೀಡಲಾಗಿದ್ದು, ನಾಳೆಯಿಂದ ಶಾಲೆಗಳು ಆರಂಭವಾಗಲಿವೆ.
ಸೆಪ್ಟೆಂಬರ್ 22ರಿಂದಲೇ ಶಿಕ್ಷಕರು ಜಾತಿಗಣತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸಮೀಕ್ಷೆಯು ತಡವಾಗಿ ಆರಂಭವಾಗಿದೆ. ಹೀಗಾಗಿ ಶಿಕ್ಷಕರು ದೈಹಿಕ ಬೌದ್ದಿಕವಾಗಿ ಒತ್ತಡದಲ್ಲಿದ್ದಾರೆ. ಇದೀಗ ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 12ರ ವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಅಕ್ಟೋಬರ್ 17ರವರೆಗೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.