ಅಮೆರಿಕಾದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

ಸಿಯಾಟಲ್‌ : ಕ್ರಾಸ್‌ವಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಪೊಲೀಸ್‌ ಕಾರ್‌ ಡಿಕ್ಕಿ ಹೊಡೆದು, ಭಾರತದ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ ನೀಡುವಂತೆ ಅಲ್ಲಿನ ಸ್ಥಳೀಯ  ನ್ಯಾಯಾಲಯ ಆದೇಶಿಸಿದೆ.

2023 ರಲ್ಲಿ ಅಮೆರಿಕದ  ಸಿಯಾಟಲ್‌ ನಗರದಲ್ಲಿ ನಡೆದಿದ್ದ ಭೀಕರ ಕಾರು ಅಪಘಾತದಲ್ಲಿ  ಸಾವಿಗೀಡಾಗಿದ್ದ ಆಂಧ್ರಪ್ರದೇಶ ಮೂಲದ ಯುವತಿ ಜಾಹ್ನವಿ ಕಂದುಲಾ (23)  ಕ್ರಾಸ್‌ವಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಪೊಲೀಸ್‌ ಕಾರೊಂದು ಜಾಹ್ನವಿ ಕಂದುಲಾ ಅವರಿಗೆ ಡಿಕ್ಕಿ ಹೊಡೆದಿತ್ತು. ಕಾರಿನ ಡಿಕ್ಕಿ ರಭಸಕ್ಕೆ ಜಾಹ್ನವಿ ಕಂದುಲಾ ಅವರು 137 ಅಡಿ ಎತ್ತರಕ್ಕೆ ಹಾರಿ ರಸ್ತೆಬದಿ ಬಿದ್ದಿದ್ದರು.
ವೇಗವಾಗಿ ಕಾರು ಓಡಿಸಕೊಂಡು ಬಂದಿದ್ದ ಪೊಲೀಸ್‌ ಅಧಿಕಾರಿ ಕೆವಿನ್‌ ಡೇವ್‌ ಅವರು ಸೌತ್ ಲೇಕ್ ಯೂನಿಯನ್ ಕ್ರಾಸ್‌ವಾಕ್‌ ಬಳಿಯ ವೇಗ ಮೀತಿಯನ್ನು ಮೀರಿದ್ದರು. ಗಂಟೆಗೆ 25 ಮೈಲು ವೇಗವಾಗಿ ಬರಬೇಕಿದ್ದ ಕಾರು, ಗಂಟೆಗೆ 74 ಮೈಲಿ ವೇಗದಲ್ಲಿ ಚಲಿಸುತ್ತಿತ್ತು ಎಂಬುದು ತನಿಖೆಯಿಂದ ದೃಢಪಟ್ಟಿತ್ತು.

ಅಪಘಾತವಾಗಿ ತೀವ್ರ ಗಾಯಗಳಿಂದ ರಸ್ತೆಯಲ್ಲಿ ನರಳುತ್ತಿದ್ದ ಜಾಹ್ನವಿ ಕಂದುಲಾ ಬಳಿ ನಿಂತಿದ್ದ ಪೊಲೀಸ್‌ ಅಧಿಕಾರಿಗಳು ಜಾಹ್ನವಿ ಅವರ ನೋವನ್ನು ಅಪಹಾಸ್ಯ ಮಾಡಿದ್ದರು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜಾಹ್ನವಿ ಅವರ ಕುಟುಂಬ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿತ್ತು.

ಜಾಹ್ನವಿ ಕಂದುಲಾ ಅವರ ಸಾವು ಹೃದಯ ವಿದ್ರಾವಕವಾಗಿತ್ತು. ಈ ಆರ್ಥಿಕ ಪರಿಹಾರವು ಕಂದುಲಾ ಅವರ ಕುಟುಂಬಕ್ಕೆ ಸ್ವಲ್ಪ ನೆಮ್ಮದಿ ತರುತ್ತದೆ ಎಂದು ಕೋರ್ಟ್ ಆಶಿಸುತ್ತದೆ ಎಂದು ವಕೀಲ ಎರಿಕಾ ಇವಾನ್ಸ್ ಅಭಿಪ್ರಾಯಪಟ್ಟಿದ್ದಾರೆ. 

ಕಂದುಲಾ ಅವರು ಸಿಯಾಟಲ್‌ ನಾರ್ಥ್‌ ಈಸ್ಟರ್ನ್‌ ವಿವಿಯಲ್ಲಿ ಮಾಹಿತಿ ವ್ಯವಸ್ಥೆಗಳ ಸಂಬಂಧಿತ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದರು. 

ಸಿಯಾಟಲ್‌ : ಕ್ರಾಸ್‌ವಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಪೊಲೀಸ್‌ ಕಾರ್‌ ಡಿಕ್ಕಿ ಹೊಡೆದು, ಭಾರತದ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ ನೀಡುವಂತೆ ಅಲ್ಲಿನ ಸ್ಥಳೀಯ  ನ್ಯಾಯಾಲಯ ಆದೇಶಿಸಿದೆ.

2023 ರಲ್ಲಿ ಅಮೆರಿಕದ  ಸಿಯಾಟಲ್‌ ನಗರದಲ್ಲಿ ನಡೆದಿದ್ದ ಭೀಕರ ಕಾರು ಅಪಘಾತದಲ್ಲಿ  ಸಾವಿಗೀಡಾಗಿದ್ದ ಆಂಧ್ರಪ್ರದೇಶ ಮೂಲದ ಯುವತಿ ಜಾಹ್ನವಿ ಕಂದುಲಾ (23)  ಕ್ರಾಸ್‌ವಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಪೊಲೀಸ್‌ ಕಾರೊಂದು ಜಾಹ್ನವಿ ಕಂದುಲಾ ಅವರಿಗೆ ಡಿಕ್ಕಿ ಹೊಡೆದಿತ್ತು. ಕಾರಿನ ಡಿಕ್ಕಿ ರಭಸಕ್ಕೆ ಜಾಹ್ನವಿ ಕಂದುಲಾ ಅವರು 137 ಅಡಿ ಎತ್ತರಕ್ಕೆ ಹಾರಿ ರಸ್ತೆಬದಿ ಬಿದ್ದಿದ್ದರು.
ವೇಗವಾಗಿ ಕಾರು ಓಡಿಸಕೊಂಡು ಬಂದಿದ್ದ ಪೊಲೀಸ್‌ ಅಧಿಕಾರಿ ಕೆವಿನ್‌ ಡೇವ್‌ ಅವರು ಸೌತ್ ಲೇಕ್ ಯೂನಿಯನ್ ಕ್ರಾಸ್‌ವಾಕ್‌ ಬಳಿಯ ವೇಗ ಮೀತಿಯನ್ನು ಮೀರಿದ್ದರು. ಗಂಟೆಗೆ 25 ಮೈಲು ವೇಗವಾಗಿ ಬರಬೇಕಿದ್ದ ಕಾರು, ಗಂಟೆಗೆ 74 ಮೈಲಿ ವೇಗದಲ್ಲಿ ಚಲಿಸುತ್ತಿತ್ತು ಎಂಬುದು ತನಿಖೆಯಿಂದ ದೃಢಪಟ್ಟಿತ್ತು.

ಅಪಘಾತವಾಗಿ ತೀವ್ರ ಗಾಯಗಳಿಂದ ರಸ್ತೆಯಲ್ಲಿ ನರಳುತ್ತಿದ್ದ ಜಾಹ್ನವಿ ಕಂದುಲಾ ಬಳಿ ನಿಂತಿದ್ದ ಪೊಲೀಸ್‌ ಅಧಿಕಾರಿಗಳು ಜಾಹ್ನವಿ ಅವರ ನೋವನ್ನು ಅಪಹಾಸ್ಯ ಮಾಡಿದ್ದರು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜಾಹ್ನವಿ ಅವರ ಕುಟುಂಬ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿತ್ತು.

ಜಾಹ್ನವಿ ಕಂದುಲಾ ಅವರ ಸಾವು ಹೃದಯ ವಿದ್ರಾವಕವಾಗಿತ್ತು. ಈ ಆರ್ಥಿಕ ಪರಿಹಾರವು ಕಂದುಲಾ ಅವರ ಕುಟುಂಬಕ್ಕೆ ಸ್ವಲ್ಪ ನೆಮ್ಮದಿ ತರುತ್ತದೆ ಎಂದು ಕೋರ್ಟ್ ಆಶಿಸುತ್ತದೆ ಎಂದು ವಕೀಲ ಎರಿಕಾ ಇವಾನ್ಸ್ ಅಭಿಪ್ರಾಯಪಟ್ಟಿದ್ದಾರೆ. 

ಕಂದುಲಾ ಅವರು ಸಿಯಾಟಲ್‌ ನಾರ್ಥ್‌ ಈಸ್ಟರ್ನ್‌ ವಿವಿಯಲ್ಲಿ ಮಾಹಿತಿ ವ್ಯವಸ್ಥೆಗಳ ಸಂಬಂಧಿತ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದರು. 

More articles

Latest article

Most read