ಬೆಂಗಳೂರು : ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಲ್ಯಾಣ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ.
ವಾತಾವರಣದ ಉಷ್ಣಾಂ ಶವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚುತ್ತಿದೆ. ಇದರಿಂದಾಗಿ ಮಾರ್ಚ್ ತಿಂಗಳಲ್ಲಿಯೇ ಉಷ್ಣಾಂಶವು ಗಣನೀಯವಾಗಿ ಏರಿಕೆ ಕಾಣುತ್ತಿದೆ.
ಬಿಸಿಲಿನಿಂದ ಬಸವಳಿದ ಹಿರಿಯರು: ತಾಪಮಾನ ಅಧಿಕವಾಗುತ್ತಿರುವ ಪರಿಣಾಮ, ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಬಸವಳಿಯುತ್ತಿದ್ದಾರೆ. ಬಿಸಿಲಿನಿಂದ ರಕ್ಷಣೆ ಪಡೆಯಲು ಹರಸಾಹಸಪಡುತ್ತಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಒಣಹವೆ ಮುಂದುವರಿಯಲ್ಲಿದೆ. ಮುಂದಿನ ಐದು ದಿನಗಳ ಅವಧಿಯಲ್ಲಿ ಗರಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚಳವಾಗುವ ಸಾಧ್ಯತೆಯಿದೆ.
ಕಲಬುರಗಿಯಲ್ಲಿ ಅತ್ಯಧಿಕ ತಾಪಮಾನ: ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಕೊಪ್ಪಳ, ಬೀದರ್, ಬಾಗಲಕೋ ಟೆ, ಗದಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶವು 40 ಡಿಗ್ರಿ ಸೆಲ್ಸಿಯಸ್ ದಾಟುವ ಬಗ್ಗೆ ಮುನ್ಸೂಚನೆ ನೀಡಿದೆ.
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ, ರಾಜ್ಯದ 12 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು 35 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂ ಶವು 40 ಡಿಗ್ರಿ ಸೆಲ್ಸಿಯಸ್ (39.8) ಸಮೀಪಿಸಿದರೆ, ರಾಯಚೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಬೆಂಗಳೂರಿಲ್ಲೂ ಅಧಿಕ ಬಿಸಿಲು : ಬೆಂಗಳೂರಿನಲ್ಲಿ ಮುಂದಿನ 2 ದಿನ ಗರಿಷ್ಠ ಉಷ್ಣಾಂಶ ಬೆಂಗಳೂರಿನಲ್ಲಿಯೂ ತಾಪಮಾನ ಏರಿಕೆ ಕಂಡಿದ್ದು, 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳು ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

