ಅಡ್ಡ ಮತದಾನ: ಹರಿಯಾಣದ 5 ಕಾಂಗ್ರೆಸ್‌ ಶಾಸಕರ ಅಮಾನತು

ಚಂಡೀಗಡ ಏ.16: ಪಕ್ಷ ವಿರೋಧಿ ಚಟುವಟಿಕೆ ಹಾಗೂ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹರಿಯಾಣ ರಾಜ್ಯದ ಐವರು ಶಾಸಕರನ್ನು ಕಾಂಗ್ರೆಸ್‌ ಅಮಾನತುಗೊಳಿಸಿದೆ.

ಪಕ್ಷದ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾವ್ ನರೇಂದರ್ ಸಿಂಗ್ ಅವರು ಹೇಳಿದ್ದಾರೆ.

ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ ಕಾಂಗ್ರೆಸ್ ಗುರುವಾರ ಹರಿಯಾಣದ ಐದು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

ಪಕ್ಷದ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾವ್ ನರೇಂದರ್ ಸಿಂಗ್ ಅವರು ಹೇಳಿದ್ದಾರೆ.

ರಾಜ್ಯ ಶಿಸ್ತು ಸಮಿತಿಯ ಶಿಫಾರಸು ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷವು ಈ ಹಿಂದೆ ಅಧಿಕೃತ ವಿಪ್ ಅನ್ನು ಧಿಕ್ಕರಿಸಿದ್ದಕ್ಕಾಗಿ ಐದು ಶಾಸಕರನ್ನು ಹೆಸರಿಸಿತ್ತು. ನರೈಂಗರ್ ಶಾಸಕಿ ಶಲ್ಲಿ ಚೌಧರಿ, ಸಧೌರಾ ಶಾಸಕಿ ರೇಣು ಬಾಲಾ, ಪುನ್ಹಾನಾ ಶಾಸಕ ಮೊಹಮ್ಮದ್ ಇಲ್ಯಾಸ್, ಹಾಥಿನ್ ಶಾಸಕ ಮೊಹಮ್ಮದ್ ಇಸ್ರೇಲ್ ಮತ್ತು ರತಿಯಾ ಶಾಸಕ ಜರ್ನೈಲ್ ಸಿಂಗ್ ಅವರನ್ನು ಈಗ ಅಮಾನತುಗೊಳಿಸಿದೆ.

ಹರಿಯಾಣ ಕಾಂಗ್ರೆಸ್‌ನ ಶಿಸ್ತು ಸಮಿತಿ ಇತ್ತೀಚೆಗೆ ಐವರು ಶಾಸಕರನ್ನು ಅಮಾನತುಗೊಳಿಸಲು ಶಿಫಾರಸು ಮಾಡಿತ್ತು.  ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಸತೀಶ್ ನಂದಲ್ ಪರವಾಗಿ ಪಕ್ಷದ ಈ ಐದು ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಸಮಿತಿ ಹೈಕಮಾಂಡ್ ಗೆ ವರದಿ ನೀಡಿತ್ತು. 

ಚಂಡೀಗಡ ಏ.16: ಪಕ್ಷ ವಿರೋಧಿ ಚಟುವಟಿಕೆ ಹಾಗೂ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹರಿಯಾಣ ರಾಜ್ಯದ ಐವರು ಶಾಸಕರನ್ನು ಕಾಂಗ್ರೆಸ್‌ ಅಮಾನತುಗೊಳಿಸಿದೆ.

ಪಕ್ಷದ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾವ್ ನರೇಂದರ್ ಸಿಂಗ್ ಅವರು ಹೇಳಿದ್ದಾರೆ.

ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ ಕಾಂಗ್ರೆಸ್ ಗುರುವಾರ ಹರಿಯಾಣದ ಐದು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.

ಪಕ್ಷದ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾವ್ ನರೇಂದರ್ ಸಿಂಗ್ ಅವರು ಹೇಳಿದ್ದಾರೆ.

ರಾಜ್ಯ ಶಿಸ್ತು ಸಮಿತಿಯ ಶಿಫಾರಸು ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷವು ಈ ಹಿಂದೆ ಅಧಿಕೃತ ವಿಪ್ ಅನ್ನು ಧಿಕ್ಕರಿಸಿದ್ದಕ್ಕಾಗಿ ಐದು ಶಾಸಕರನ್ನು ಹೆಸರಿಸಿತ್ತು. ನರೈಂಗರ್ ಶಾಸಕಿ ಶಲ್ಲಿ ಚೌಧರಿ, ಸಧೌರಾ ಶಾಸಕಿ ರೇಣು ಬಾಲಾ, ಪುನ್ಹಾನಾ ಶಾಸಕ ಮೊಹಮ್ಮದ್ ಇಲ್ಯಾಸ್, ಹಾಥಿನ್ ಶಾಸಕ ಮೊಹಮ್ಮದ್ ಇಸ್ರೇಲ್ ಮತ್ತು ರತಿಯಾ ಶಾಸಕ ಜರ್ನೈಲ್ ಸಿಂಗ್ ಅವರನ್ನು ಈಗ ಅಮಾನತುಗೊಳಿಸಿದೆ.

ಹರಿಯಾಣ ಕಾಂಗ್ರೆಸ್‌ನ ಶಿಸ್ತು ಸಮಿತಿ ಇತ್ತೀಚೆಗೆ ಐವರು ಶಾಸಕರನ್ನು ಅಮಾನತುಗೊಳಿಸಲು ಶಿಫಾರಸು ಮಾಡಿತ್ತು.  ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಸತೀಶ್ ನಂದಲ್ ಪರವಾಗಿ ಪಕ್ಷದ ಈ ಐದು ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಸಮಿತಿ ಹೈಕಮಾಂಡ್ ಗೆ ವರದಿ ನೀಡಿತ್ತು. 

More articles

Latest article

Most read