ತೃತೀಯ ಭಾಷೆಗೆ ಮುಂದಿನ ವರ್ಷದಿಂದ ಗ್ರೇಡ್‌ ನೀಡುವಂತೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಎಸ್ಸೆಸ್ಸೆಲ್ಸಿಯಲ್ಲಿ  ತೃತೀಯ ಭಾಷೆಗೆ ಗ್ರೇಡ್‌ ಬದಲು ಅಂಕ ನೀಡುವಂತೆ ರಾಜ್ಯ ಸರ್ಕಾರಕ್ಕೆ   ಹೈಕೋರ್ಟ್ ಆದೇಶಿಸಿದೆ.

ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ವರ್ಷ ಹಳೇ ಪದ್ಧತಿಯನ್ನೇ ಮುಂದುವರಿಸುವಂತೆ ಹೇಳಿದೆ. 

ಸರ್ಕಾರದ ಪರ ವಾದ ಮಂಡಿಸಿದ ಎ.ಜಿ ಶಶಿಕಿರಣ್ ಶೆಟ್ಟಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಂಬಂಧ 2025ರ ಅಕ್ಟೋಬರ್ 28ರಂದು ಸುತ್ತೋಲೆ ಹೊರಡಿಸಲಾಗಿದೆ. ಬಳಿಕ 2026ರ ಮಾರ್ಚ್ 18- ಏಪ್ರಿಲ್ 2 ರವರೆಗೆ ಪರೀಕ್ಷೆ ನಡೆದಿದೆ. ದಿನಪತ್ರಿಕೆ ವರದಿ ಆಧಾರದ ಮೇಲೆ ಅರ್ಜಿ ವಜಾ ಆಗಿದೆ ಎಂದು ವಾದಿಸಿದರು.

ಅದಕ್ಕೆ ನ್ಯಾಯಮೂರ್ತಿಗಳಾದ ಇಂದಿರೇಶ್, ನಿಮ್ಮ ಅಧಿಸೂಚನೆಯ ಉದ್ದೇಶ ಏನು? ಕಳೆದ ವರ್ಷ 1.75 ಲಕ್ಷ ವಿದ್ಯಾರ್ಥಿಗಳು ಫೇಲ್ ಆಗಿದ್ರು. ಎಲ್ಲರನ್ನೂ ಪಾಸ್ ಮಾಡೋದಾ ನಿಮ್ಮ  ಉದ್ದೇಶವಾ ಎಂದು ಕೇಳಿದ್ದಾರೆ.
ಅದಕ್ಕೆ ಎ.ಜಿ ಶಶಿಕಿರಣ್ ಶೆಟ್ಟಿ ವಾದಿಸಿ, ಫೇಲ್ ಆಗಿದ್ರೆ ಒಳ್ಳೆಯ ಶಿಕ್ಷಕರರನ್ನು ನೇಮಕ ಮಾಡಿ. ಹಿಂದಿ ಭಾಷೆ ಕಲಿಯಲಿ ಬಿಡಿ. ತೃತೀಯ ಭಾಷೆ ಒಮ್ಮೆ ಕನ್ನಡವೂ ಆಗಿರಲಿದೆ ಅಲ್ವಾ. ಇಲ್ಲಿ ಹಿಂದಿ ತೃತೀಯ ಭಾಷೆ ವಿಚಾರಕ್ಕೆ ಗ್ರೇಡ್‌ ತರಲಾಗಿದೆ. ಹಿಂದಿ ಭಾಷೆಯಿಂದ ವಿದ್ಯಾರ್ಥಿಗಳ ಮೇಲೆ ಹೊರೆ ಜಾಸ್ತಿಯಾಗಿದೆ. ನಾವು ಬೇರೆ ವಿಷಯಗಳ ಬಗ್ಗೆ ಹೇಳುತ್ತಿಲ್ಲ. ತೃತೀಯ ಭಾಷೆ ಹಿಂದಿ ಬಗ್ಗೆಯಷ್ಟೆ. ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರಿಂದ ಫೇಲ್ ಆಗ್ತಿದ್ದಾರೆ ಎಂದು ತಿಳಿಸಿದರು.

ಎಲ್ಲರನ್ನೂ ಪಾಸು ಮಾಡುವ ನಿಮ್ಮ ಉದ್ದೇಶ ಸರಿ ಇರಬಹುದು. ಅದು ಕೇಳಲು ಚೆನ್ನಾಗಿದೆ. ಈ ವರ್ಷ ಹೀಗೆ ಇರಲಿ. ಮುಂದಿನ ವರ್ಷದಿಂದ ನೀವು ಇದನ್ನು ಮಾಡಬಹುದು. ಮುಂದಿನ ವರ್ಷ ಅಗತ್ಯ ಕ್ರಮ ತೆಗೆದುಕೊಳ್ಳಬಹುದು ಅಲ್ವಾ ಎಂದು ಹೇಳಿದ ಜಡ್ಜ್, ಅಂಕಗಳನ್ನು ನೀಡಲು ನಿರ್ದೇಶಿಸಿದರು. ಅಲ್ಲದೇ, ತನ್ನ ಆದೇಶ ಮರುಪರಿಶೀಲಿಸಲು ಹೈಕೋರ್ಟ್ ನಿರಾಕರಿಸಿದೆ.

ಬೆಂಗಳೂರು: ಎಸ್ಸೆಸ್ಸೆಲ್ಸಿಯಲ್ಲಿ  ತೃತೀಯ ಭಾಷೆಗೆ ಗ್ರೇಡ್‌ ಬದಲು ಅಂಕ ನೀಡುವಂತೆ ರಾಜ್ಯ ಸರ್ಕಾರಕ್ಕೆ   ಹೈಕೋರ್ಟ್ ಆದೇಶಿಸಿದೆ.

ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ವರ್ಷ ಹಳೇ ಪದ್ಧತಿಯನ್ನೇ ಮುಂದುವರಿಸುವಂತೆ ಹೇಳಿದೆ. 

ಸರ್ಕಾರದ ಪರ ವಾದ ಮಂಡಿಸಿದ ಎ.ಜಿ ಶಶಿಕಿರಣ್ ಶೆಟ್ಟಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಂಬಂಧ 2025ರ ಅಕ್ಟೋಬರ್ 28ರಂದು ಸುತ್ತೋಲೆ ಹೊರಡಿಸಲಾಗಿದೆ. ಬಳಿಕ 2026ರ ಮಾರ್ಚ್ 18- ಏಪ್ರಿಲ್ 2 ರವರೆಗೆ ಪರೀಕ್ಷೆ ನಡೆದಿದೆ. ದಿನಪತ್ರಿಕೆ ವರದಿ ಆಧಾರದ ಮೇಲೆ ಅರ್ಜಿ ವಜಾ ಆಗಿದೆ ಎಂದು ವಾದಿಸಿದರು.

ಅದಕ್ಕೆ ನ್ಯಾಯಮೂರ್ತಿಗಳಾದ ಇಂದಿರೇಶ್, ನಿಮ್ಮ ಅಧಿಸೂಚನೆಯ ಉದ್ದೇಶ ಏನು? ಕಳೆದ ವರ್ಷ 1.75 ಲಕ್ಷ ವಿದ್ಯಾರ್ಥಿಗಳು ಫೇಲ್ ಆಗಿದ್ರು. ಎಲ್ಲರನ್ನೂ ಪಾಸ್ ಮಾಡೋದಾ ನಿಮ್ಮ  ಉದ್ದೇಶವಾ ಎಂದು ಕೇಳಿದ್ದಾರೆ.
ಅದಕ್ಕೆ ಎ.ಜಿ ಶಶಿಕಿರಣ್ ಶೆಟ್ಟಿ ವಾದಿಸಿ, ಫೇಲ್ ಆಗಿದ್ರೆ ಒಳ್ಳೆಯ ಶಿಕ್ಷಕರರನ್ನು ನೇಮಕ ಮಾಡಿ. ಹಿಂದಿ ಭಾಷೆ ಕಲಿಯಲಿ ಬಿಡಿ. ತೃತೀಯ ಭಾಷೆ ಒಮ್ಮೆ ಕನ್ನಡವೂ ಆಗಿರಲಿದೆ ಅಲ್ವಾ. ಇಲ್ಲಿ ಹಿಂದಿ ತೃತೀಯ ಭಾಷೆ ವಿಚಾರಕ್ಕೆ ಗ್ರೇಡ್‌ ತರಲಾಗಿದೆ. ಹಿಂದಿ ಭಾಷೆಯಿಂದ ವಿದ್ಯಾರ್ಥಿಗಳ ಮೇಲೆ ಹೊರೆ ಜಾಸ್ತಿಯಾಗಿದೆ. ನಾವು ಬೇರೆ ವಿಷಯಗಳ ಬಗ್ಗೆ ಹೇಳುತ್ತಿಲ್ಲ. ತೃತೀಯ ಭಾಷೆ ಹಿಂದಿ ಬಗ್ಗೆಯಷ್ಟೆ. ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರಿಂದ ಫೇಲ್ ಆಗ್ತಿದ್ದಾರೆ ಎಂದು ತಿಳಿಸಿದರು.

ಎಲ್ಲರನ್ನೂ ಪಾಸು ಮಾಡುವ ನಿಮ್ಮ ಉದ್ದೇಶ ಸರಿ ಇರಬಹುದು. ಅದು ಕೇಳಲು ಚೆನ್ನಾಗಿದೆ. ಈ ವರ್ಷ ಹೀಗೆ ಇರಲಿ. ಮುಂದಿನ ವರ್ಷದಿಂದ ನೀವು ಇದನ್ನು ಮಾಡಬಹುದು. ಮುಂದಿನ ವರ್ಷ ಅಗತ್ಯ ಕ್ರಮ ತೆಗೆದುಕೊಳ್ಳಬಹುದು ಅಲ್ವಾ ಎಂದು ಹೇಳಿದ ಜಡ್ಜ್, ಅಂಕಗಳನ್ನು ನೀಡಲು ನಿರ್ದೇಶಿಸಿದರು. ಅಲ್ಲದೇ, ತನ್ನ ಆದೇಶ ಮರುಪರಿಶೀಲಿಸಲು ಹೈಕೋರ್ಟ್ ನಿರಾಕರಿಸಿದೆ.

More articles

Latest article

Most read