ದೆಹಲಿಯಲ್ಲಿ ಕುತೂಹಲ ಮೂಡಿಸುತ್ತಿರುವ ಕರ್ನಾಟಕ ರಾಜಕೀಯ, ಮುಖ್ಯಮಂತ್ರಿ ಬದಲಾವಣೆಯೇ? ಸಚಿವ ಸಂಪುಟ ವಿಸ್ತರಣೆಯೇ?

ನವದೆಹಲಿ : ಕರ್ನಾಟಕರ ರಾಜಕಾರಣ ದೆಹಲಿಗೆ ವರ್ಗವಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಸಿಎಂ ಮತ್ತು ಡಿಸಿಎಂ ಜೊತೆಗೆ ಸಚಿವರು ಮತ್ತು ಶಾಸಕರುಗಳ ದಂಡೇ ದೆಹಲಿಯಲ್ಲಿ ಬೀಡು ಬಿಟ್ಟಿದೆ.

ರಾಜ್ಯಸಭಾ ಚುನಾವಣೆ, ವಿಧಾನ ಪರಿಷತ್ತಿನ ನೇಮಕದಂತಹ ವಿಷಯಗಳ ಬಗ್ಗೆ ಚರ್ಚಿಸಲು ಹೈಕಮಾಂಡ್ ರಾಜ್ಯ ನಾಯಕರನ್ನು ಆಹ್ವಾನಿಸಿದೆ ಎಂದು ಹೇಳಲಾಗುತ್ತಿದೆಯಾದರೂ ದೆಹಲಿಯಲ್ಲಿ ಇಂದು ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕೂಡ ಇಂದಿರಾ ಭವನಕ್ಕೆ ಆಗಮಿಸಿದ್ದಾರೆ. ಸಿಎಂ – ಡಿಸಿಎಂ ಇಬ್ಬರನ್ನು ಹೈಕಮಾಂಡ್‌ ನಾಯಕರು ಒನ್‌ ಟು ಒನ್‌ ಮಾತುಕತೆ ನಡೆಸಿದ್ದಾರೆ.

ಸಭೆಗೂ ಮುನ್ನ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದರು. ಜೊತೆಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು. ಬಳಿಕ ರಾಹುಲ್‌ ಗಾಂಧಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕಳೆದ ಅರ್ಧ ಗಂಟೆಯಿಂದ ಚರ್ಚೆ ನಡೆಸುತ್ತಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಮುಂದಿನ ರಾಜ್ಯಸಭೆ ಅಥವಾ ವಿಧಾನ ಪರಿಷತ್ ಚುನಾವಣೆಯ ಬಗ್ಗೆ ಚರ್ಚೆ ನಡೆಯಬಹುದು. ಜೊತೆಗೆ, ಸಂಪುಟ ಪುನರ್ ರಚನೆಯ ಬಗ್ಗೆಯೂ ಇರಬಹುದು. ಈ ಸಭೆಯ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಮಾತ್ರ ಗೊತ್ತಿದೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾಗಬೇಕು, ಸರ್ಕಾರಕ್ಕೆ ಮೂರು ವರ್ಷವಾಗಿದ್ದು ಈಗಲಾದರೂ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಲವು ಬಾರಿ ಪ್ರಸ್ತಾಪ ಮಾಡಿದ್ದರು. ಇದಕ್ಕೆ ಕೆಲವು ಶಾಸಕರು ನೇರವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಅಧಿಕಾರ ಹಸ್ತಾಂತರದಂತಹ ಪ್ರಕ್ರಿಯೆಗಳೂ ನಡೆಯುತ್ತವೇ ಅಥವಾ ಮೂರು ವರ್ಷ ಪೂರೈಸಿರುವ ಸಿದ್ದರಾಮಯ್ಯ ಅವರಿಗೆ ಸಚಿವ ಸಂಪುಟದ ಪುನಾರಚನೆಯ ಅವಕಾಶ ಸಿಗುತ್ತದೆಯೇ ಎಂಬುದು ಕುತೂಹಲ.

ರಾಜ್ಯದಿಂದ ಆಹ್ವಾನಿಸಲಾದ ಸಿಎಂ-ಡಿಸಿಎಂ ಅವರನ್ನು ಹೊರತುಪಡಿಸಿ ಹೈಕಮಾಂಡ್ ನಾಯಕರಷ್ಟೇ ಕಳೆದ ಎರಡು ತಾಸಿಗಳಿಂದ ಚರ್ಚೆ ನಡೆಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ರಾಹುಲ್‌ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರು ಗಂಭೀರ ಚರ್ಚೆ ನಡೆಸಿದ್ದು, ಕರ್ನಾಟಕದ ರಾಜ್ಯ ರಾಜಕಾರಣದ ಬಗ್ಗೆ ಯಾವ ತೀರ್ಮಾನವನ್ನು ಹೈಕಮಾಂಡ್ ನಾಯಕರು ಪ್ರಕಟಿಸಬಹುದು ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೂ ಸಹ ಹೈಕಮಾಂಡ್ ನಾಯಕರುಗಳು ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ರಾಜ್ಯಸಭಾ ಚುನಾವಣೆ, ವಿಧಾನ ಪರಿಷತ್ ನೇಮಕಾತಿಗಳು, ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್)ನಂತರಹ ವಿಷಯಗಳ ಬಗ್ಗೆ ಚರ್ಚೆ ಅಷ್ಟೇ ಅಲ್ಲದೆ, ರಾಜ್ಯ ರಾಜಕಾರಣ ಬದಲಾವಣೆ ಮಾಡುವಂತಹ ತೀರ್ಮಾನಗಳು ಸಹ ಹೊರಬೀಳಬಹುದೇ ಎಂಬ ಕುತೂಹಲ ಮೂಡಿದೆ.

ನವದೆಹಲಿ : ಕರ್ನಾಟಕರ ರಾಜಕಾರಣ ದೆಹಲಿಗೆ ವರ್ಗವಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಸಿಎಂ ಮತ್ತು ಡಿಸಿಎಂ ಜೊತೆಗೆ ಸಚಿವರು ಮತ್ತು ಶಾಸಕರುಗಳ ದಂಡೇ ದೆಹಲಿಯಲ್ಲಿ ಬೀಡು ಬಿಟ್ಟಿದೆ.

ರಾಜ್ಯಸಭಾ ಚುನಾವಣೆ, ವಿಧಾನ ಪರಿಷತ್ತಿನ ನೇಮಕದಂತಹ ವಿಷಯಗಳ ಬಗ್ಗೆ ಚರ್ಚಿಸಲು ಹೈಕಮಾಂಡ್ ರಾಜ್ಯ ನಾಯಕರನ್ನು ಆಹ್ವಾನಿಸಿದೆ ಎಂದು ಹೇಳಲಾಗುತ್ತಿದೆಯಾದರೂ ದೆಹಲಿಯಲ್ಲಿ ಇಂದು ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕೂಡ ಇಂದಿರಾ ಭವನಕ್ಕೆ ಆಗಮಿಸಿದ್ದಾರೆ. ಸಿಎಂ – ಡಿಸಿಎಂ ಇಬ್ಬರನ್ನು ಹೈಕಮಾಂಡ್‌ ನಾಯಕರು ಒನ್‌ ಟು ಒನ್‌ ಮಾತುಕತೆ ನಡೆಸಿದ್ದಾರೆ.

ಸಭೆಗೂ ಮುನ್ನ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದರು. ಜೊತೆಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು. ಬಳಿಕ ರಾಹುಲ್‌ ಗಾಂಧಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕಳೆದ ಅರ್ಧ ಗಂಟೆಯಿಂದ ಚರ್ಚೆ ನಡೆಸುತ್ತಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಮುಂದಿನ ರಾಜ್ಯಸಭೆ ಅಥವಾ ವಿಧಾನ ಪರಿಷತ್ ಚುನಾವಣೆಯ ಬಗ್ಗೆ ಚರ್ಚೆ ನಡೆಯಬಹುದು. ಜೊತೆಗೆ, ಸಂಪುಟ ಪುನರ್ ರಚನೆಯ ಬಗ್ಗೆಯೂ ಇರಬಹುದು. ಈ ಸಭೆಯ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಮಾತ್ರ ಗೊತ್ತಿದೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾಗಬೇಕು, ಸರ್ಕಾರಕ್ಕೆ ಮೂರು ವರ್ಷವಾಗಿದ್ದು ಈಗಲಾದರೂ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಲವು ಬಾರಿ ಪ್ರಸ್ತಾಪ ಮಾಡಿದ್ದರು. ಇದಕ್ಕೆ ಕೆಲವು ಶಾಸಕರು ನೇರವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಅಧಿಕಾರ ಹಸ್ತಾಂತರದಂತಹ ಪ್ರಕ್ರಿಯೆಗಳೂ ನಡೆಯುತ್ತವೇ ಅಥವಾ ಮೂರು ವರ್ಷ ಪೂರೈಸಿರುವ ಸಿದ್ದರಾಮಯ್ಯ ಅವರಿಗೆ ಸಚಿವ ಸಂಪುಟದ ಪುನಾರಚನೆಯ ಅವಕಾಶ ಸಿಗುತ್ತದೆಯೇ ಎಂಬುದು ಕುತೂಹಲ.

ರಾಜ್ಯದಿಂದ ಆಹ್ವಾನಿಸಲಾದ ಸಿಎಂ-ಡಿಸಿಎಂ ಅವರನ್ನು ಹೊರತುಪಡಿಸಿ ಹೈಕಮಾಂಡ್ ನಾಯಕರಷ್ಟೇ ಕಳೆದ ಎರಡು ತಾಸಿಗಳಿಂದ ಚರ್ಚೆ ನಡೆಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ರಾಹುಲ್‌ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರು ಗಂಭೀರ ಚರ್ಚೆ ನಡೆಸಿದ್ದು, ಕರ್ನಾಟಕದ ರಾಜ್ಯ ರಾಜಕಾರಣದ ಬಗ್ಗೆ ಯಾವ ತೀರ್ಮಾನವನ್ನು ಹೈಕಮಾಂಡ್ ನಾಯಕರು ಪ್ರಕಟಿಸಬಹುದು ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೂ ಸಹ ಹೈಕಮಾಂಡ್ ನಾಯಕರುಗಳು ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ರಾಜ್ಯಸಭಾ ಚುನಾವಣೆ, ವಿಧಾನ ಪರಿಷತ್ ನೇಮಕಾತಿಗಳು, ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್)ನಂತರಹ ವಿಷಯಗಳ ಬಗ್ಗೆ ಚರ್ಚೆ ಅಷ್ಟೇ ಅಲ್ಲದೆ, ರಾಜ್ಯ ರಾಜಕಾರಣ ಬದಲಾವಣೆ ಮಾಡುವಂತಹ ತೀರ್ಮಾನಗಳು ಸಹ ಹೊರಬೀಳಬಹುದೇ ಎಂಬ ಕುತೂಹಲ ಮೂಡಿದೆ.

More articles

Latest article

Most read