ಬೆಂಗಳೂರು : ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು CREDAI (ಭಾರತದ ರಿಯಲ್ ಎಸ್ಟೇಟ್ ಡೆವಲಪರ್ಗಳ ರಾಷ್ಟ್ರೀಯ ಪ್ರತಿನಿಧಿ ಸಂಸ್ಥೆ)ಯ ಪ್ರತಿನಿಧಿಗಳು ಭೇಟಿಯಾಗಿ ಶುಭಾಶಯ ಕೋರಿದರು.
ಭೇಟಿಯ ಸಂದರ್ಭದಲ್ಲಿ ರಾಜ್ಯದ ನಗರಾಭಿವೃದ್ಧಿ ಕ್ಷೇತ್ರದ ಪ್ರಸ್ತುತ ಬೆಳವಣಿಗೆಗಳು, ನಗರಗಳ ಸುಸ್ಥಿರ ಅಭಿವೃದ್ಧಿ, ವಸತಿ ಮತ್ತು ಮೂಲಸೌಕರ್ಯ ಯೋಜನೆಗಳ ಅನುಷ್ಠಾನ, ನಗರ ಪ್ರದೇಶಗಳಲ್ಲಿ ಹೂಡಿಕೆ ಮತ್ತು ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು.
ನಗರಗಳ ಯೋಜಿತ ಅಭಿವೃದ್ಧಿ, ಸಾರ್ವಜನಿಕರಿಗೆ ಗುಣಮಟ್ಟದ ಸೌಲಭ್ಯಗಳ ಒದಗಿಸುವಿಕೆ ಹಾಗೂ ನಗರಾಭಿವೃದ್ಧಿ ಕ್ಷೇತ್ರದಲ್ಲಿ ಸರ್ಕಾರ ಮತ್ತು ಖಾಸಗಿ ವಲಯದ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ CREDAI ಸಂಸ್ಥೆಯ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದರು.

