ಕೋಲಾರ : ಕಳೆದ ರಾತ್ರಿ ಬೇತಮಂಗಲ ರಸ್ತೆಯಲ್ಲಿರುವ ನಂದಿನಿ ಪಾಲಿಮರ್ಸ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ತಮಿಳುನಾಡು ಮೂಲದ ಬೈಕ್ ಸವಾರರನೊಬ್ಬ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಮೃತ ದುರ್ದೈವಿಯನ್ನು ತಮಿಳುನಾಡು ವೇಲೂರಿನ 27 ವರ್ಷದ ಅಜಿತ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ ತನ್ನ ಆರ್ ಜೆಡ್ ಬೈಕ್ ನಲ್ಲಿ ಕಳೆದ ರಾತ್ರಿ ತಮಿಳುನಾಡಿನಿಂದ ಬೆಂಗಳೂರಿನ ಕಡೆ ಬರುತ್ತಿರುವಾಗ ರಾತ್ರಿ ಬೇತಮಂಗಲ ರಸ್ತೆಯಲ್ಲಿ ಅಪರಿಚಿತ ವಾಹನ ಬಡಿದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಕಳೆದ ರಾತ್ರಿಯೇ ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಭಾರತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

