ಪಂಜಾಬ್‌ ಮಾಜಿ ಡಿಸಿಎಂ ಸುಖಬೀರ್ ಸಿಂಗ್ ಬಾದಲ್ ಗೆ ಇರಿತ

ಮಹಾರಾಷ್ಟ್ರ : ಪಂಜಾಬ್‌ನ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಗುರುವಾರ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಮಾತಾ ಸಾಹಿಬ್ ಗುರುದ್ವಾರದ ಬಳಿ ದಾಳಿ ನಡೆದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ದುಷ್ಕರ್ಮಿಯೊಬ್ಬ ಹರಿತವಾದ ಆಯುಧದಿಂದ ಬಾದಲ್ ಅವರ ಮೇಲೆ ದಾಳಿ ನಡೆಸಿದ್ದಾನೆ. ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ, ನಾಂದೇಡ್‌ನ ಗುರುದ್ವಾರಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಬಳಿಕ ನಗರದ ಹೊರವಲಯದಲ್ಲಿ ಬಾದಲ್ ಅವರ ಮೇಲೆ ದಾಳಿ ನಡೆದಿದೆ. ನಿಹಾಂಗ್ ಸಿಖ್ಖ್‌ವೊಬ್ಬ ಕಿರ್ಪಾಣ್‌ನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ದಾಳಿಯಲ್ಲಿ ಬಾದಲ್ ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಓರ್ವ ಭದ್ರತಾ ಸಿಬಂದಿಗೂ ಗಾಯವಾಗಿದೆ. ಘಟನೆಯ ವೇಳೆ ಬಾದಲ್ ಅವರ ಪತ್ನಿ ಹಾಗೂ ಅಕಾಲಿ ದಳದ ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್ ಕೂಡ ಅವರೊಂದಿಗೆ ಇದ್ದರು. ದಾಳಿಯ ಬಳಿಕದ ವಿಡಿಯೋದಲ್ಲಿ ಬಾದಲ್ ಅವರ ಬಲಗೈಗೆ ಕೇಸರಿ ಬಣ್ಣದ ಬಟ್ಟೆಯನ್ನು ಸುತ್ತಿಕೊಂಡು ನಡೆಯುತ್ತಿರುವುದು ಕಂಡುಬಂದಿದೆ.

ಅಕಾಲಿ ದಳದ ಮೂಲಗಳ ಪ್ರಕಾರ, ಬಾದಲ್ ಅವರ ಕೈಗೆ ಗಾಯವಾಗಿದ್ದು, ಅವರ ಸ್ಥಿತಿ ಅಪಾಯಕಾರಿಯಾಗಿಲ್ಲ. ಗಾಯಕ್ಕೆ ಹೊಲಿಗೆ ಹಾಕಲಾಗಿದ್ದು, ನಾಂದೇಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಬಾದಲ್ ಅವರು ಗುರುವಾರ ಕುಟುಂಬ ಸಮೇತ ನಾಂದೇಡ್‌ನ ತಮ್ ಶ್ರೀ ಹಜೂರ್ ಸಾಹಿಬ್‌ ಗೆ ಭೇಟಿ ನೀಡಿದ್ದ ವೇಳೆ ದಾಳಿ ನಡೆದಿದೆ.

ಸುಖ್ಬೀರ್ ಸಿಂಗ್ ಬಾದಲ್ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿಯಾಗಿದ್ದು, ಶಿರೋಮಣಿ ಅಕಾಲಿ ದಳದ ಅಧ್ಯಕ್ಷರಾಗಿದ್ದಾರೆ. ಅವರು 2009ರಿಂದ 2017ರವರೆಗೆ ಪಂಜಾಬ್‌ನ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಅವರ ತಂದೆ ಪ್ರಕಾಶ್ ಸಿಂಗ್ ಬಾದಲ್ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ.

ಬಾದಲ್ ಅವರ ಮೇಲೆ ದಾಳಿ ನಡೆದಿರುವುದು ಇದೇ ಮೊದಲಲ್ಲ. 2024ರ ಡಿಸೆಂಬರ್‌ನಲ್ಲಿ ಅಮೃತಸರದ ಸ್ವರ್ಣ ಮಂದಿರದ ಹೊರಭಾಗದಲ್ಲಿ ಧಾರ್ಮಿಕ ಪ್ರಾಯಶ್ಚಿತ್ತದ ಸೇವೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಲಾಗಿತ್ತು. ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದ ಪರಿಣಾಮ ಆ ದಾಳಿ ವಿಫಲವಾಗಿತ್ತು.

ಈ ಹಿನ್ನೆಲೆಯಲ್ಲಿ ನಾಂದೇಡ್‌ನಲ್ಲಿ ನಡೆದಿರುವ ಇಂದಿನ ದಾಳಿ ಭದ್ರತಾ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಪ್ರಮುಖ ರಾಜಕೀಯ ನಾಯಕ ಹಾಗೂ ಅಕಾಲಿ ದಳದ ಅಧ್ಯಕ್ಷರಾಗಿರುವ ಬಾದಲ್ ಅವರು ಧಾರ್ಮಿಕ ಕೇಂದ್ರದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ದಾಳಿ ನಡೆದಿರುವುದರಿಂದ ಘಟನೆಯ ಭದ್ರತಾ ಆಯಾಮಗಳ ಬಗ್ಗೆಯೂ ತನಿಖೆ ನಡೆಯುವ ಸಾಧ್ಯತೆಯಿದೆ. ದಾಳಿಯ ನಿಖರ ಉದ್ದೇಶ, ಆರೋಪಿಯ ಹಿನ್ನೆಲೆ ಮತ್ತು ಘಟನೆಯ ಸಂಪೂರ್ಣ ವಿವರಗಳು ಪೊಲೀಸ್ ತನಿಖೆಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.

ಮಹಾರಾಷ್ಟ್ರ : ಪಂಜಾಬ್‌ನ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಗುರುವಾರ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಮಾತಾ ಸಾಹಿಬ್ ಗುರುದ್ವಾರದ ಬಳಿ ದಾಳಿ ನಡೆದಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ದುಷ್ಕರ್ಮಿಯೊಬ್ಬ ಹರಿತವಾದ ಆಯುಧದಿಂದ ಬಾದಲ್ ಅವರ ಮೇಲೆ ದಾಳಿ ನಡೆಸಿದ್ದಾನೆ. ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ, ನಾಂದೇಡ್‌ನ ಗುರುದ್ವಾರಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಬಳಿಕ ನಗರದ ಹೊರವಲಯದಲ್ಲಿ ಬಾದಲ್ ಅವರ ಮೇಲೆ ದಾಳಿ ನಡೆದಿದೆ. ನಿಹಾಂಗ್ ಸಿಖ್ಖ್‌ವೊಬ್ಬ ಕಿರ್ಪಾಣ್‌ನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ದಾಳಿಯಲ್ಲಿ ಬಾದಲ್ ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಓರ್ವ ಭದ್ರತಾ ಸಿಬಂದಿಗೂ ಗಾಯವಾಗಿದೆ. ಘಟನೆಯ ವೇಳೆ ಬಾದಲ್ ಅವರ ಪತ್ನಿ ಹಾಗೂ ಅಕಾಲಿ ದಳದ ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್ ಕೂಡ ಅವರೊಂದಿಗೆ ಇದ್ದರು. ದಾಳಿಯ ಬಳಿಕದ ವಿಡಿಯೋದಲ್ಲಿ ಬಾದಲ್ ಅವರ ಬಲಗೈಗೆ ಕೇಸರಿ ಬಣ್ಣದ ಬಟ್ಟೆಯನ್ನು ಸುತ್ತಿಕೊಂಡು ನಡೆಯುತ್ತಿರುವುದು ಕಂಡುಬಂದಿದೆ.

ಅಕಾಲಿ ದಳದ ಮೂಲಗಳ ಪ್ರಕಾರ, ಬಾದಲ್ ಅವರ ಕೈಗೆ ಗಾಯವಾಗಿದ್ದು, ಅವರ ಸ್ಥಿತಿ ಅಪಾಯಕಾರಿಯಾಗಿಲ್ಲ. ಗಾಯಕ್ಕೆ ಹೊಲಿಗೆ ಹಾಕಲಾಗಿದ್ದು, ನಾಂದೇಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಬಾದಲ್ ಅವರು ಗುರುವಾರ ಕುಟುಂಬ ಸಮೇತ ನಾಂದೇಡ್‌ನ ತಮ್ ಶ್ರೀ ಹಜೂರ್ ಸಾಹಿಬ್‌ ಗೆ ಭೇಟಿ ನೀಡಿದ್ದ ವೇಳೆ ದಾಳಿ ನಡೆದಿದೆ.

ಸುಖ್ಬೀರ್ ಸಿಂಗ್ ಬಾದಲ್ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿಯಾಗಿದ್ದು, ಶಿರೋಮಣಿ ಅಕಾಲಿ ದಳದ ಅಧ್ಯಕ್ಷರಾಗಿದ್ದಾರೆ. ಅವರು 2009ರಿಂದ 2017ರವರೆಗೆ ಪಂಜಾಬ್‌ನ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಅವರ ತಂದೆ ಪ್ರಕಾಶ್ ಸಿಂಗ್ ಬಾದಲ್ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ.

ಬಾದಲ್ ಅವರ ಮೇಲೆ ದಾಳಿ ನಡೆದಿರುವುದು ಇದೇ ಮೊದಲಲ್ಲ. 2024ರ ಡಿಸೆಂಬರ್‌ನಲ್ಲಿ ಅಮೃತಸರದ ಸ್ವರ್ಣ ಮಂದಿರದ ಹೊರಭಾಗದಲ್ಲಿ ಧಾರ್ಮಿಕ ಪ್ರಾಯಶ್ಚಿತ್ತದ ಸೇವೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಲಾಗಿತ್ತು. ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದ ಪರಿಣಾಮ ಆ ದಾಳಿ ವಿಫಲವಾಗಿತ್ತು.

ಈ ಹಿನ್ನೆಲೆಯಲ್ಲಿ ನಾಂದೇಡ್‌ನಲ್ಲಿ ನಡೆದಿರುವ ಇಂದಿನ ದಾಳಿ ಭದ್ರತಾ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಪ್ರಮುಖ ರಾಜಕೀಯ ನಾಯಕ ಹಾಗೂ ಅಕಾಲಿ ದಳದ ಅಧ್ಯಕ್ಷರಾಗಿರುವ ಬಾದಲ್ ಅವರು ಧಾರ್ಮಿಕ ಕೇಂದ್ರದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ದಾಳಿ ನಡೆದಿರುವುದರಿಂದ ಘಟನೆಯ ಭದ್ರತಾ ಆಯಾಮಗಳ ಬಗ್ಗೆಯೂ ತನಿಖೆ ನಡೆಯುವ ಸಾಧ್ಯತೆಯಿದೆ. ದಾಳಿಯ ನಿಖರ ಉದ್ದೇಶ, ಆರೋಪಿಯ ಹಿನ್ನೆಲೆ ಮತ್ತು ಘಟನೆಯ ಸಂಪೂರ್ಣ ವಿವರಗಳು ಪೊಲೀಸ್ ತನಿಖೆಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.

More articles

Latest article

Most read