ವಿಶೇಷ ಸ್ಥಾನಮಾನ ರದ್ದು ಮಾಡದಿದ್ದರೆ PoK ಜನರು ಜಮ್ಮು-ಕಾಶ್ಮೀರ ಸೇರ್ಪಡೆಗೆ ಆಗ್ರಹಿಸುತ್ತಿದ್ದರು: ಒಮರ್ ಅಬ್ದುಲ್ಲಾ

ಶ್ರೀನಗರ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯದ ಸ್ಥಾನಮಾನವನ್ನು 2019ರಲ್ಲಿ ಕೇಂದ್ರ ಸರ್ಕಾರ ರದ್ದುಪಡಿಸದೇ ಇದ್ದಿದ್ದರೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ದ ಜನರು ಇಂದು ಜಮ್ಮು-ಕಾಶ್ಮೀರದೊಂದಿಗೆ ಮರುಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಒಮರ್ ಅಬ್ದುಲ್ಲಾ, ನಿಯಂತ್ರಣ ರೇಖೆಯ ಆಚೆಗಿನ ಬೆಳವಣಿಗೆಗಳ ಬಗ್ಗೆ ತೀವ್ರ ನೋವು ಮತ್ತು ಕಳವಳ ವ್ಯಕ್ತಪಡಿಸಿದರು.

2019ರಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯದ ಸ್ಥಾನಮಾನವನ್ನು ರದ್ದು ಮಾಡದೇ ಇದ್ದಿದ್ದರೆ, ಇಂದು PoKನ ಜನರು ನಮ್ಮೊಂದಿಗೆ ಮರುಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು ಎಂದು ಅವರು ಹೇಳಿದರು.

PoKನಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ನಡೆದ ಪ್ರತಿಭಟನೆಗಳಲ್ಲಿ ಹಲವರು ಮೃತಪಟ್ಟಿದ್ದು, ಹಲವರು ಗಾಯಗೊಂಡು ಬಂಧನಕ್ಕೊಳಗಾಗಿರುವುದು ನೋವು ತಂದಿದೆ ಎಂದು ಒಮರ್ ಅಬ್ದುಲ್ಲಾ ಹೇಳಿದರು. ಅಲ್ಲಿನ ಪರಿಸ್ಥಿತಿಯು 1947ರಲ್ಲಿ ಜಮ್ಮು-ಕಾಶ್ಮೀರದ ಜನರು ತೆಗೆದುಕೊಂಡ ನಿರ್ಧಾರ ಸರಿಯಾಗಿತ್ತು ಎಂಬುದನ್ನು ಮತ್ತೊಮ್ಮೆ ತೋರಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.

1947ರಲ್ಲಿ ಪಾಕಿಸ್ತಾನದಿಂದ ಬಂದ ಬುಡಕಟ್ಟು ದಾಳಿಕೋರರನ್ನು ಎದುರಿಸಿ ಕಾಶ್ಮೀರವನ್ನು ರಕ್ಷಿಸಲು ಹೋರಾಡಿದ ತಮ್ಮ ತಾತ ಹಾಗೂ ನ್ಯಾಷನಲ್ ಕಾನ್ಫರೆನ್ಸ್‌ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಸೇರಿದಂತೆ ಅಂದಿನ ನಾಯಕರನ್ನು ಒಮರ್ ಸ್ಮರಿಸಿದರು. ಭಾರತೀಯ ಸೇನೆ ಕಾಶ್ಮೀರಕ್ಕೆ ಆಗಮಿಸುವುದಕ್ಕೂ ಮುನ್ನವೇ ಕಾಶ್ಮೀರಿಗಳು ದಾಳಿಕೋರರ ವಿರುದ್ಧ ಹೋರಾಡಿದ್ದರು ಎಂದು ಹೇಳಿದರು.

“ಆಕ್ರಮಣಕಾರರೇ ಎಚ್ಚರ, ನಾವು ಕಾಶ್ಮೀರಿಗಳು ಸಿದ್ಧರಾಗಿದ್ದೇವೆ” ಎಂಬ ಅಂದಿನ ಘೋಷಣೆಯನ್ನು ಉಲ್ಲೇಖಿಸಿದ ಅವರು, 1947ರಲ್ಲಿ ಭಾರತವನ್ನು ಸೇರಲು ಕಾಶ್ಮೀರದ ನಾಯಕರು ತೆಗೆದುಕೊಂಡ ನಿರ್ಧಾರ ಸರಿಯಾಗಿತ್ತು ಎಂದು ಹೇಳಿದರು.

ಜಮ್ಮು-ಕಾಶ್ಮೀರದ ರಾಜ್ಯದ ಸ್ಥಾನಮಾನ ಮತ್ತು ಸಂವಿಧಾನಾತ್ಮಕ ಭರವಸೆಗಳನ್ನು ಮರುಸ್ಥಾಪಿಸುವ ಹೋರಾಟವನ್ನು ತಮ್ಮ ಸರ್ಕಾರ ಮುಂದುವರಿಸಲಿದೆ ಎಂದು ಒಮರ್ ಅಬ್ದುಲ್ಲಾ ಪುನರುಚ್ಚರಿಸಿದರು. 2019ರ ಆಗಸ್ಟ್‌ನಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಹಿಂದಿನ ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಪುನರ್‌ರಚಿಸಲಾಗಿತ್ತು.

PoKನ ಜನರನ್ನು ಜಮ್ಮು-ಕಾಶ್ಮೀರದವರೇ ಎಂದು ಪರಿಗಣಿಸಲಾಗುತ್ತಿದೆ ಎಂದು ಹೇಳಿದ ಒಮರ್, ವಿಧಾನಸಭೆಯಲ್ಲಿ ನಿಯಂತ್ರಣ ರೇಖೆಯ ಆಚೆಯ ಪ್ರದೇಶಗಳಿಗೆ ಮೀಸಲಿಟ್ಟ ಸ್ಥಾನಗಳು ಇನ್ನೂ ಖಾಲಿ ಇವೆ. ಒಂದು ದಿನ ಆ ಪ್ರದೇಶದ ಪ್ರತಿನಿಧಿಗಳು ಆ ಸ್ಥಾನಗಳಲ್ಲಿ ಕುಳಿತುಕೊಳ್ಳುವ ನಿರೀಕ್ಷೆಯಿದೆ ಎಂದರು.

ಆದರೆ, ಒಮರ್ ಅಬ್ದುಲ್ಲಾ ಅವರ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುನಿಲ್ ಶರ್ಮಾ, ಸ್ವಾತಂತ್ರ್ಯೋತ್ಸವದಂತಹ ರಾಷ್ಟ್ರೀಯ ಕಾರ್ಯಕ್ರಮವನ್ನು ರಾಜಕೀಯ ಭಾಷಣಕ್ಕೆ ಬಳಸಿರುವುದು ಸೂಕ್ತವಲ್ಲ ಎಂದು ಟೀಕಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯದ ಸ್ಥಾನಮಾನವನ್ನು 2019ರಲ್ಲಿ ಕೇಂದ್ರ ಸರ್ಕಾರ ರದ್ದುಪಡಿಸದೇ ಇದ್ದಿದ್ದರೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ದ ಜನರು ಇಂದು ಜಮ್ಮು-ಕಾಶ್ಮೀರದೊಂದಿಗೆ ಮರುಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಒಮರ್ ಅಬ್ದುಲ್ಲಾ, ನಿಯಂತ್ರಣ ರೇಖೆಯ ಆಚೆಗಿನ ಬೆಳವಣಿಗೆಗಳ ಬಗ್ಗೆ ತೀವ್ರ ನೋವು ಮತ್ತು ಕಳವಳ ವ್ಯಕ್ತಪಡಿಸಿದರು.

2019ರಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯದ ಸ್ಥಾನಮಾನವನ್ನು ರದ್ದು ಮಾಡದೇ ಇದ್ದಿದ್ದರೆ, ಇಂದು PoKನ ಜನರು ನಮ್ಮೊಂದಿಗೆ ಮರುಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು ಎಂದು ಅವರು ಹೇಳಿದರು.

PoKನಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ನಡೆದ ಪ್ರತಿಭಟನೆಗಳಲ್ಲಿ ಹಲವರು ಮೃತಪಟ್ಟಿದ್ದು, ಹಲವರು ಗಾಯಗೊಂಡು ಬಂಧನಕ್ಕೊಳಗಾಗಿರುವುದು ನೋವು ತಂದಿದೆ ಎಂದು ಒಮರ್ ಅಬ್ದುಲ್ಲಾ ಹೇಳಿದರು. ಅಲ್ಲಿನ ಪರಿಸ್ಥಿತಿಯು 1947ರಲ್ಲಿ ಜಮ್ಮು-ಕಾಶ್ಮೀರದ ಜನರು ತೆಗೆದುಕೊಂಡ ನಿರ್ಧಾರ ಸರಿಯಾಗಿತ್ತು ಎಂಬುದನ್ನು ಮತ್ತೊಮ್ಮೆ ತೋರಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.

1947ರಲ್ಲಿ ಪಾಕಿಸ್ತಾನದಿಂದ ಬಂದ ಬುಡಕಟ್ಟು ದಾಳಿಕೋರರನ್ನು ಎದುರಿಸಿ ಕಾಶ್ಮೀರವನ್ನು ರಕ್ಷಿಸಲು ಹೋರಾಡಿದ ತಮ್ಮ ತಾತ ಹಾಗೂ ನ್ಯಾಷನಲ್ ಕಾನ್ಫರೆನ್ಸ್‌ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಸೇರಿದಂತೆ ಅಂದಿನ ನಾಯಕರನ್ನು ಒಮರ್ ಸ್ಮರಿಸಿದರು. ಭಾರತೀಯ ಸೇನೆ ಕಾಶ್ಮೀರಕ್ಕೆ ಆಗಮಿಸುವುದಕ್ಕೂ ಮುನ್ನವೇ ಕಾಶ್ಮೀರಿಗಳು ದಾಳಿಕೋರರ ವಿರುದ್ಧ ಹೋರಾಡಿದ್ದರು ಎಂದು ಹೇಳಿದರು.

“ಆಕ್ರಮಣಕಾರರೇ ಎಚ್ಚರ, ನಾವು ಕಾಶ್ಮೀರಿಗಳು ಸಿದ್ಧರಾಗಿದ್ದೇವೆ” ಎಂಬ ಅಂದಿನ ಘೋಷಣೆಯನ್ನು ಉಲ್ಲೇಖಿಸಿದ ಅವರು, 1947ರಲ್ಲಿ ಭಾರತವನ್ನು ಸೇರಲು ಕಾಶ್ಮೀರದ ನಾಯಕರು ತೆಗೆದುಕೊಂಡ ನಿರ್ಧಾರ ಸರಿಯಾಗಿತ್ತು ಎಂದು ಹೇಳಿದರು.

ಜಮ್ಮು-ಕಾಶ್ಮೀರದ ರಾಜ್ಯದ ಸ್ಥಾನಮಾನ ಮತ್ತು ಸಂವಿಧಾನಾತ್ಮಕ ಭರವಸೆಗಳನ್ನು ಮರುಸ್ಥಾಪಿಸುವ ಹೋರಾಟವನ್ನು ತಮ್ಮ ಸರ್ಕಾರ ಮುಂದುವರಿಸಲಿದೆ ಎಂದು ಒಮರ್ ಅಬ್ದುಲ್ಲಾ ಪುನರುಚ್ಚರಿಸಿದರು. 2019ರ ಆಗಸ್ಟ್‌ನಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಹಿಂದಿನ ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಪುನರ್‌ರಚಿಸಲಾಗಿತ್ತು.

PoKನ ಜನರನ್ನು ಜಮ್ಮು-ಕಾಶ್ಮೀರದವರೇ ಎಂದು ಪರಿಗಣಿಸಲಾಗುತ್ತಿದೆ ಎಂದು ಹೇಳಿದ ಒಮರ್, ವಿಧಾನಸಭೆಯಲ್ಲಿ ನಿಯಂತ್ರಣ ರೇಖೆಯ ಆಚೆಯ ಪ್ರದೇಶಗಳಿಗೆ ಮೀಸಲಿಟ್ಟ ಸ್ಥಾನಗಳು ಇನ್ನೂ ಖಾಲಿ ಇವೆ. ಒಂದು ದಿನ ಆ ಪ್ರದೇಶದ ಪ್ರತಿನಿಧಿಗಳು ಆ ಸ್ಥಾನಗಳಲ್ಲಿ ಕುಳಿತುಕೊಳ್ಳುವ ನಿರೀಕ್ಷೆಯಿದೆ ಎಂದರು.

ಆದರೆ, ಒಮರ್ ಅಬ್ದುಲ್ಲಾ ಅವರ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುನಿಲ್ ಶರ್ಮಾ, ಸ್ವಾತಂತ್ರ್ಯೋತ್ಸವದಂತಹ ರಾಷ್ಟ್ರೀಯ ಕಾರ್ಯಕ್ರಮವನ್ನು ರಾಜಕೀಯ ಭಾಷಣಕ್ಕೆ ಬಳಸಿರುವುದು ಸೂಕ್ತವಲ್ಲ ಎಂದು ಟೀಕಿಸಿದ್ದಾರೆ.

More articles

Latest article

Most read