ದಕ್ಷಿಣ ಕನ್ನಡ : ಕಲ್ಲಡ್ಕ ಪ್ರಭಾಕರ್ ಭಟ್ ಅವರು ಇಂದು ಸೌಜನ್ಯಳ ಮನೆಗೆ ಭೇಟಿ ನೀಡಿ, ನ್ಯಾಯಕ್ಕಾಗಿ ನಡೆಯುತ್ತಿರುವ ಆಕೆಯ ಕುಟುಂಬದ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಹಾಗೂ ₹200 ಕೋಟಿ ರೂ.ಗಳ ಬಜೆಟ್ ಆರೋಪದ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರು ಮತ್ತು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
₹200 ಕೋಟಿಗಳ ಪಿತೂರಿ’ ಮತ್ತು ‘ವಿದೇಶಿ ಧನಸಹಾಯದ ಅಪಪ್ರಚಾರದ ಅಭಿಯಾನ’ ಎಂಬ ಸಿದ್ಧಾಂತಗಳ ಕಥೆ ಏನಾಯಿತು? ಸತ್ಯವನ್ನು ಒಪ್ಪಿಕೊಳ್ಳಲು ಯಾವುದೇ ರಾಜಕೀಯ ಪಕ್ಷದ ಅನುಮತಿಯ ಅಗತ್ಯವಿಲ್ಲ ಎಂಬುದು ಇದರಿಂದ ಸಾಬೀತಾಗಿದೆ.

