ಕಲಬುರಗಿಯ ಎರಡು ಮಹತ್ವದ ನೀರಾವರಿ ಯೋಜನೆಗಳು, ರೂ.105.20 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಸೆ. 3: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಮಹತ್ವದ ನೀರಾವರಿ ಯೋಜನೆಗಳಿಗೆ ಇಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ, ಮಾಹಿತಿ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಆಳಂದ ತಾಲೂಕಿನ 12 ಕೆರೆಗಳಿಗೆ ನೀರು ತುಂಬಿಸುವ ಯೋಜನೆ
ಬೋಳಿ ನದಿಯಿಂದ ನೀರನ್ನು ಎತ್ತಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ 12 ಕೆರೆಗಳಿಗೆ ತುಂಬಿಸುವ ರೂ.56 ಕೋಟಿ ಮೊತ್ತದ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಗೆ 2023-24ನೇ ಸಾಲಿನಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಇದೀಗ ಯೋಜನೆಯನ್ನು ಮುಂದುವರಿಸಲು ಸಚಿವ ಸಂಪುಟದ ಒಪ್ಪಿಗೆ ದೊರೆತಿದೆ.
ಯೋಜನೆಯಡಿ 28.94 ಎಂಸಿಎಫ್‌ಟಿ ನೀರನ್ನು 12 ಕೆರೆಗಳಿಗೆ ತುಂಬಿಸಲಾಗುವುದು. ಬೋಳಿ ನದಿಯಿಂದ ನೀರನ್ನು ಎತ್ತಲು ಪಂಪಿಂಗ್ ವ್ಯವಸ್ಥೆ ನಿರ್ಮಿಸಲಾಗುತ್ತಿದ್ದು, ಅಗತ್ಯ ಪಂಪ್‌ಹೌಸ್‌, ವಿದ್ಯುತ್‌ ಉಪಕೇಂದ್ರ, ಪೈಪ್‌ಲೈನ್‌ ಹಾಗೂ ವಿತರಣಾ ಜಾಲವನ್ನು ನಿರ್ಮಿಸಲಾಗುತ್ತದೆ.
ಈ ಯೋಜನೆಯಿಂದ ಆಳಂದ ತಾಲೂಕಿನ ಕೆರೆಗಳಿಗೆ ನೀರು ಲಭ್ಯವಾಗುವುದರ ಜೊತೆಗೆ, ಜಲಮೂಲಗಳ ಸಮರ್ಪಕ ಬಳಕೆ ಹಾಗೂ ನೀರಾವರಿ ಸೌಲಭ್ಯಕ್ಕೆ ಉತ್ತೇಜನ ದೊರೆಯಲಿದೆ.

ಣ್ಣ ನೀರಾವರಿ ಕಾಮಗಾರಿಗಳಿಗೆ ರೂ.49.20 ಕೋಟಿ
ಇದೇ ವೇಳೆ, ಕಲಬುರಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಣ್ಣ ನೀರಾವರಿ ಹಾಗೂ ಜಲಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಲು ರೂ.49.20 ಕೋಟಿ ಮೊತ್ತದ ಯೋಜನೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ. ಯೋಜನೆಯಡಿ ವಿವಿಧ ಪ್ರದೇಶಗಳಲ್ಲಿನ ಕೆರೆಗಳು, ನಾಲಾಗಳು ಹಾಗೂ ಜಲಮೂಲಗಳ ಅಭಿವೃದ್ಧಿ, ಸರಣಿ ಚೆಕ್‌ಡ್ಯಾಂ ನಿರ್ಮಾಣ, ನಾಲಾ ಆಳಗೊಳಿಸುವಿಕೆ ಮತ್ತು ಅಗಲೀಕರಣ ಸೇರಿದಂತೆ ಜಲಸಂಗ್ರಹ ಹಾಗೂ ಅಂತರ್ಜಲ ಮರುಪೂರಣಕ್ಕೆ ಪೂರಕವಾದ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಎರಡೂ ಯೋಜನೆಗಳ ಮೂಲಕ ಕಲಬುರಗಿ ಜಿಲ್ಲೆಯ ನೀರಾವರಿ ಮೂಲಸೌಕರ್ಯವನ್ನು ಬಲಪಡಿಸುವುದು, ಲಭ್ಯವಿರುವ ನೀರಿನ ಸಮರ್ಪಕ ಬಳಕೆ ಹಾಗೂ ಕೆರೆ-ನಾಲಾಗಳ ಮೂಲಕ ನೀರಿನ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ.

“ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ. ನೀರಾವರಿ ಹಾಗೂ ಜಲಸಂರಕ್ಷಣೆಗೆ ಸಂಬಂಧಿಸಿದ ಈ ಎರಡು ಪ್ರಮುಖ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದು ಜಿಲ್ಲೆಯ ರೈತರು ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ. ನೀರಿನ ಲಭ್ಯತೆ ಹೆಚ್ಚಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಸರ್ಕಾರ ಬದ್ಧವಾಗಿದೆ” ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಒಟ್ಟು ರೂ.105.20 ಕೋಟಿ ಮೊತ್ತದ ಈ ಎರಡು ಯೋಜನೆಗಳು ಕಲಬುರಗಿ ಜಿಲ್ಲೆಯ ನೀರಾವರಿ ಹಾಗೂ ಜಲಸಂರಕ್ಷಣಾ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಿವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ

ಬೆಂಗಳೂರು, ಸೆ. 3: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಮಹತ್ವದ ನೀರಾವರಿ ಯೋಜನೆಗಳಿಗೆ ಇಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ, ಮಾಹಿತಿ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಆಳಂದ ತಾಲೂಕಿನ 12 ಕೆರೆಗಳಿಗೆ ನೀರು ತುಂಬಿಸುವ ಯೋಜನೆ
ಬೋಳಿ ನದಿಯಿಂದ ನೀರನ್ನು ಎತ್ತಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ 12 ಕೆರೆಗಳಿಗೆ ತುಂಬಿಸುವ ರೂ.56 ಕೋಟಿ ಮೊತ್ತದ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಗೆ 2023-24ನೇ ಸಾಲಿನಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಇದೀಗ ಯೋಜನೆಯನ್ನು ಮುಂದುವರಿಸಲು ಸಚಿವ ಸಂಪುಟದ ಒಪ್ಪಿಗೆ ದೊರೆತಿದೆ.
ಯೋಜನೆಯಡಿ 28.94 ಎಂಸಿಎಫ್‌ಟಿ ನೀರನ್ನು 12 ಕೆರೆಗಳಿಗೆ ತುಂಬಿಸಲಾಗುವುದು. ಬೋಳಿ ನದಿಯಿಂದ ನೀರನ್ನು ಎತ್ತಲು ಪಂಪಿಂಗ್ ವ್ಯವಸ್ಥೆ ನಿರ್ಮಿಸಲಾಗುತ್ತಿದ್ದು, ಅಗತ್ಯ ಪಂಪ್‌ಹೌಸ್‌, ವಿದ್ಯುತ್‌ ಉಪಕೇಂದ್ರ, ಪೈಪ್‌ಲೈನ್‌ ಹಾಗೂ ವಿತರಣಾ ಜಾಲವನ್ನು ನಿರ್ಮಿಸಲಾಗುತ್ತದೆ.
ಈ ಯೋಜನೆಯಿಂದ ಆಳಂದ ತಾಲೂಕಿನ ಕೆರೆಗಳಿಗೆ ನೀರು ಲಭ್ಯವಾಗುವುದರ ಜೊತೆಗೆ, ಜಲಮೂಲಗಳ ಸಮರ್ಪಕ ಬಳಕೆ ಹಾಗೂ ನೀರಾವರಿ ಸೌಲಭ್ಯಕ್ಕೆ ಉತ್ತೇಜನ ದೊರೆಯಲಿದೆ.

ಣ್ಣ ನೀರಾವರಿ ಕಾಮಗಾರಿಗಳಿಗೆ ರೂ.49.20 ಕೋಟಿ
ಇದೇ ವೇಳೆ, ಕಲಬುರಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಣ್ಣ ನೀರಾವರಿ ಹಾಗೂ ಜಲಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಲು ರೂ.49.20 ಕೋಟಿ ಮೊತ್ತದ ಯೋಜನೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ. ಯೋಜನೆಯಡಿ ವಿವಿಧ ಪ್ರದೇಶಗಳಲ್ಲಿನ ಕೆರೆಗಳು, ನಾಲಾಗಳು ಹಾಗೂ ಜಲಮೂಲಗಳ ಅಭಿವೃದ್ಧಿ, ಸರಣಿ ಚೆಕ್‌ಡ್ಯಾಂ ನಿರ್ಮಾಣ, ನಾಲಾ ಆಳಗೊಳಿಸುವಿಕೆ ಮತ್ತು ಅಗಲೀಕರಣ ಸೇರಿದಂತೆ ಜಲಸಂಗ್ರಹ ಹಾಗೂ ಅಂತರ್ಜಲ ಮರುಪೂರಣಕ್ಕೆ ಪೂರಕವಾದ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಎರಡೂ ಯೋಜನೆಗಳ ಮೂಲಕ ಕಲಬುರಗಿ ಜಿಲ್ಲೆಯ ನೀರಾವರಿ ಮೂಲಸೌಕರ್ಯವನ್ನು ಬಲಪಡಿಸುವುದು, ಲಭ್ಯವಿರುವ ನೀರಿನ ಸಮರ್ಪಕ ಬಳಕೆ ಹಾಗೂ ಕೆರೆ-ನಾಲಾಗಳ ಮೂಲಕ ನೀರಿನ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ.

“ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ. ನೀರಾವರಿ ಹಾಗೂ ಜಲಸಂರಕ್ಷಣೆಗೆ ಸಂಬಂಧಿಸಿದ ಈ ಎರಡು ಪ್ರಮುಖ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದು ಜಿಲ್ಲೆಯ ರೈತರು ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ. ನೀರಿನ ಲಭ್ಯತೆ ಹೆಚ್ಚಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಸರ್ಕಾರ ಬದ್ಧವಾಗಿದೆ” ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಒಟ್ಟು ರೂ.105.20 ಕೋಟಿ ಮೊತ್ತದ ಈ ಎರಡು ಯೋಜನೆಗಳು ಕಲಬುರಗಿ ಜಿಲ್ಲೆಯ ನೀರಾವರಿ ಹಾಗೂ ಜಲಸಂರಕ್ಷಣಾ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಿವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ

More articles

Latest article

Most read