ಕೂಡ್ಲಿಗಿಯಲ್ಲಿ ‘ಪ್ರಜಾಸೇವೆ’ಗೆ ಸಿಎಂ ಚಾಲನೆ: ಜನರ ಬಾಗಿಲಿಗೆ ಸರ್ಕಾರದ ಸೇವೆ-ಸವಲತ್ತು

ಕೂಡ್ಲಿಗಿ ಸೆ. 5: ಸರ್ಕಾರದ ಸೇವೆ ಮತ್ತು ಸವಲತ್ತುಗಳನ್ನು ಜನರ ಬಾಗಿಲಿಗೇ ತಲುಪಿಸುವ ಉದ್ದೇಶದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಕೂಡ್ಲಿಗಿಯಲ್ಲಿ ಚಾಲನೆ ನೀಡಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆಯಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಏಕಕಾಲದಲ್ಲಿ ಪ್ರಜಾಸೇವೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ‘ಪ್ರಜಾಸೇವೆ’ ಅಭಿಯಾನ ನಡೆಯಲಿದೆ. ಜಿಲ್ಲೆ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ, ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ವೇದಿಕೆಯಡಿ ಜನರಿಗೆ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮೂಲಕ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಪ್ರಯತ್ನ ನಡೆಯಲಿದೆ. ಸರ್ಕಾರದ ವಿವಿಧ ಯೋಜನೆಗಳು, ಸೌಲಭ್ಯಗಳು ಮತ್ತು ಸೇವೆಗಳ ಕುರಿತು ಜನರಿಗೆ ಮಾಹಿತಿ ನೀಡುವುದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ.

ಅಭಿಯಾನದ ಅಂಗವಾಗಿ ಬೃಹತ್ ವೇದಿಕೆಗಳನ್ನು ನಿರ್ಮಿಸಲಾಗುತ್ತಿದ್ದು, ರಾಜ್ಯಾದ್ಯಂತ 50 ಸಾವಿರಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲೇ ಹಾಜರಿದ್ದು, ಜನರ ಅಹವಾಲುಗಳಿಗೆ ಸ್ಪಂದಿಸಲಿದ್ದಾರೆ.

ಕೂಡ್ಲಿಗಿ ಸೆ. 5: ಸರ್ಕಾರದ ಸೇವೆ ಮತ್ತು ಸವಲತ್ತುಗಳನ್ನು ಜನರ ಬಾಗಿಲಿಗೇ ತಲುಪಿಸುವ ಉದ್ದೇಶದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಕೂಡ್ಲಿಗಿಯಲ್ಲಿ ಚಾಲನೆ ನೀಡಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆಯಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಏಕಕಾಲದಲ್ಲಿ ಪ್ರಜಾಸೇವೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ‘ಪ್ರಜಾಸೇವೆ’ ಅಭಿಯಾನ ನಡೆಯಲಿದೆ. ಜಿಲ್ಲೆ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ, ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ವೇದಿಕೆಯಡಿ ಜನರಿಗೆ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮೂಲಕ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಪ್ರಯತ್ನ ನಡೆಯಲಿದೆ. ಸರ್ಕಾರದ ವಿವಿಧ ಯೋಜನೆಗಳು, ಸೌಲಭ್ಯಗಳು ಮತ್ತು ಸೇವೆಗಳ ಕುರಿತು ಜನರಿಗೆ ಮಾಹಿತಿ ನೀಡುವುದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ.

ಅಭಿಯಾನದ ಅಂಗವಾಗಿ ಬೃಹತ್ ವೇದಿಕೆಗಳನ್ನು ನಿರ್ಮಿಸಲಾಗುತ್ತಿದ್ದು, ರಾಜ್ಯಾದ್ಯಂತ 50 ಸಾವಿರಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲೇ ಹಾಜರಿದ್ದು, ಜನರ ಅಹವಾಲುಗಳಿಗೆ ಸ್ಪಂದಿಸಲಿದ್ದಾರೆ.

More articles

Latest article

Most read