ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬುದನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಲಿ: ಸಂತೋಷ ಲಾಡ್

Most read

ಬಿಜೆಪಿಯವರು ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಲಿ, ಯಾವ ಕಾರಣಕ್ಕೆ ಬದಲಾವಣೆ ಮಾಡತ್ತಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಸಚಿವ ಸಂತೋಷ ಲಾಡ್ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಬಹಿರಂಗವಾಗಿ ಹೇಳಲಿ, ಅದು ಬಿಟ್ಟು ಒಬ್ಬೊಬ್ಬರ ಕಡೆಯಿಂದ ಬೇರೆ ಬೇರೆ ರೀತಿಯಲ್ಲಿ ಹೇಳಿಕೆ ಕೊಡಿಸುತ್ತಾರೆ ಎಂದು ಹರಿಹಾಯ್ದರು.

ಎಲ್ಲಿಯವರೆಗೆ ಶೋಷಿತ ವರ್ಗದ ಜನರು ಬದಕಿದ್ದಾರೆ. ಅವರ ಹಿಂದೆ ಕಾಂಗ್ರೆಸ್ ಪಕ್ಷವಿದೆ. ನಾವು ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲಿಕ್ಕೆ ಬಿಡುವುದಿಲ್ಲ. ದೇಶದ ಜನರು ಇದನ್ನೆಲ್ಲಾ ನೋಡುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಾರೆ. ಅವರಿಗೆ ದೇಶದ ಯುವಕರು ತಕ್ಕಪಾಠ ಕಲಿಸತ್ತಾರೆ ಎಂದರು.

ಅನಂತಕುಮಾರ್ ಅವರನ್ನು ಮುಂದೆ ಇಟ್ಟುಕೊಂಡು ಬಿಜೆಪಿ ನಾಟಕ ಮಾಡುತ್ತಿದೆ. ಅವರ ಮೇಲೆ ಬಿಜೆಪಿಯವರು ಕ್ರಮ ಕೈಗೊಳ್ಳಬೇಕು. ಇಂತವರಿಗೆ ಟಿಕೆಟ್ ನೀಡುತ್ತೀರಾ? ಇಂತವರೊಂದಿಗೆ ನೀವು ವೇದಿಕೆ ಹಂಚಿಕೊಳ್ಳುತ್ತೀರಾ? ಅವರನ್ನು ಕೂಡಲೇ ಪಕ್ಷದಿಂದ ಉಚ್ಚಾಟನೆ ಮಾಡಿ ನೋಡೋಣ ಎಂದು ಹೇಳಿದರು

More articles

Latest article