ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣೆ ಪ್ರಚಾರ ಆರಂಭ

Most read

ಈಶ್ವರಪ್ಪ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳು ನೀಡಿತ್ತಿದ್ದ, ಪುರಲೆ ಹಾಗೂ ಗುರುಪುರ ಬಡಾವಣೆಯಲ್ಲಿ ಇಂದು ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಮತ ಬೇಟೆಯನ್ನು ಪ್ರಾರಂಭಿಸಿದರು.

ನಂತರ ಬಡಾವಣೆಯ ನಾಗರೀಕರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು 1989ರಲ್ಲಿ‌ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದಾಗ ನನ್ನ ಜೀವನದ ರಾಜಕೀಯ ಬೆಳವಣಿಗೆಗೆ ಆಶೀರ್ವಾದ ಮಾಡಿದ ಪ್ರದೇಶಗಳು ಇವಾಗಿವೆ. ನನಗೆ ಅತಿ ಹೆಚ್ಚು ಮತಗಳು ಬಂದ ಪ್ರದೇಶಗಳೂ ಇವೆ ಆಗಿವೆ. ಹಾಗಾಗಿ ಇಲ್ಲಿಗೆ ಬಂದು ನನ್ನ‌ ಮೊದಲ ಪ್ರಚಾರ ನಡೆಸುತ್ತಿದ್ದೆನೆ. ಮಾ.22 ರಂದು ಮಂಗಳವಾರ ಬೂತ್​ ಮಟ್ಟದ ಸಭೆ ನಡೆಸಲಾಗುತ್ತದೆ. ಈ ಸಭೆಗೆ ಆಗಮಿಸುವಂತೆ ತಮ್ಮ ಬೆಂಬಲಿಗರಿಗೆ ಮನವಿ ಮಾಡಿದರು.

ಮತ್ತೊಂದೆಡೆ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ‌ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಪಕ್ಷದಲ್ಲಿದ್ದುಕೊಂಡೇ ಪಕ್ಷ ಘೋಷಿಸಿರುವ ಅಧಿಕೃತ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ಬಂಡಾಯವಾಗಿ ಸ್ಪರ್ಧಿಸುವ ಕುರಿತು ಹೇಳಿಕೆ ನೀಡಿದ್ದರು ಸಹ ಇದುವರೆಗೂ ಪಕ್ಷ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.

ಈ ಕುರಿತು ಮಾತನಾಡಿದ ಜಿಲ್ಲಾ‌ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಅವರು, ನಮ್ಮ ಪಕ್ಷದ ಹಿರಿಯರು ಈಶ್ವರಪ್ಪ ವಿಚಾರವಾಗಿ ಮಾತನಾಡುತ್ತಿದ್ದಾರೆ.‌ ಚರ್ಚೆ ನಡೆಸುತ್ತಿದ್ದಾರೆ. ವೈಯಕ್ತಿಕವಾಗಿ ನಾನು ಈಶ್ವರಪ್ಪನವರ ಜೊತೆ ಮಾತನಾಡಿದ್ದೇನೆ. ನಾನು ಮಾತನಾಡಿದಾಗ ಯಾವುದೇ ಕಾರಣಕ್ಕೆ, ಕಾಂತೇಶ್ ಅವರಿಗೆ ಹಾವೇರಿಯಲ್ಲಿ ಟಿಕೆಟ್ ಸಿಗದ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅತ್ಯಂತ ಸ್ಪಷ್ಟಪಡಿಸಿದ್ದಾರೆ.‌

ಈ ಕುರಿತು ಸಂಬಂಧಪಟ್ಟ ಹಿರಿಯರೊಂದಿಗೆ ನಾನು ಸಮಾಲೋಚನೆ ನಡೆಸಿದ್ದೆನೆ. ಅಲ್ಲಿರುವ ಗೊಂದಲವನ್ನು ನಿವಾರಿಸಲು ಮಾತುಕತೆ ನಡೆಸಲಾಗುತ್ತಿದೆ.‌ ಅವರ ಜೊತೆ ಮಾತುಕಥೆ ಫಲಪ್ರಧವಾಗುವ ನಿರೀಕ್ಷೆಯಲ್ಲಿ ಇದ್ದೇವೆ. ಕಾಲ ಮಿಂಚಿಲ್ಲ, ಸೂಕ್ತ ಸಮಯದಲ್ಲಿ ಎಲ್ಲಾ ಸರಿ ಹೋಗುತ್ತದೆ. ಇನ್ನು ಕೊಡ ನಾಮಪತ್ರ ಸಲ್ಲಿಕೆ, ನಾಮಪತ್ರ ವಾಪಸ್ ಪಡೆದುಕೊಳ್ಳುವುದು ಇದೆ. ಸಣ್ಣ ಪಾಲಿಕೆ ಚುನಾವಣೆಯಲ್ಲಿ ಭಿನ್ನಮತ ಇರುತ್ತದೆ. ಜಗತ್ತಿನ ದೊಡ್ಡ ಪಕ್ಷದಲ್ಲಿ, ಲೋಕಸಭಾ ಚುನಾವಣೆಯಲ್ಲಿ ಗೊಂದಲ ಇರುತ್ತದೆ. ನಮ್ಮ‌ಮೊದಲ ಆದ್ಯತೆ, ಸರಿ ಮಾಡುವುದು. ಮಾತುಕತೆ ನಡೆಸಲಾಗುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಬಿಜೆಪಿ ಯಾವತ್ತು ಹಿಂದೆ ಬಿದ್ದಿಲ್ಲ ಎಂದು ತಿಳಿಸಿದ್ದಾರೆ.

More articles

Latest article