ಯಡಿಯೂರಪ್ಪ ಕಾಲಿಗೆ ಬಿದ್ದು ಬಿಜೆಪಿಗೆ ಸೇರ್ಪಡೆಯಾದ ಗಣಿದನಿ ಜನಾರ್ದನ ರೆಡ್ಡಿ

Most read

ಲೋಕಸಭೆ ಚುನಾವಣೆಗೆ (Lok sabha Election 2024) ಹತ್ತಿರ ಬರುತ್ತಿದ್ದಂತೆ ಪಕ್ಷ ಬಿಡುವವರ ಸಂಖ್ಯೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಅದರಂತೆ ಶಾಸಕ ಜನಾರ್ದನ ರೆಡ್ಡಿ (Janardhan Reddy) ಇಂದು ಬಿಜೆಪಿಗೆ ಮರಳಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಶಾಲು ಹಾಕಿ ಬರಮಾಡಿಕೊಂಡಿದ್ದಾರೆ. ಯಡಿಯೂರಪ್ಪ ಕಾಲಿಗೆ ಬಿದ್ದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಪಕ್ಷ ಸೇರ್ಪಡೆಯ ನಂತರ ಮಾತನಾಡಿದ ಜನಾರ್ಧನ ರೆಡ್ಡಿ, ನಾನು ನನ್ನ ಮನೆಗೆ ವಾಪಸ್ ಬಂದಿರೋದು ಖುಷಿಯಾಗ್ತಿದೆ. ದೇಶದ ಅಭಿವೃದ್ಧಿಗೆ ಮೋದಿ (PM Modi) ಕೈ ಬಲಪಡಿಸಲು ಬಿಜೆಪಿಗೆ ವಾಪಸ್‌ ಬನ್ನಿ ಅಂತ ಅಮಿತ್‌ ಶಾ ಕೇಳಿಕೊಂಡಿದ್ರು ಅವರ ಮಾತಿನಂತೆ ನಮ್ಮ ಪಕ್ಷವನ್ನ ಬಿಜೆಪಿ ಜತೆ ವಿಲೀನಗೊಳಿಸಿದ್ದೇನೆ ಅಂತ ಹೇಳಿದ್ದಾರೆ.

ಜನಾರ್ದನ ರೆಡ್ಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಪಕ್ಷ ಸ್ಥಾಪಿಸಿ ಗಂಗಾವತಿ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದಿದ್ದರು.

feature Image credit : PTI

More articles

Latest article