ಹಾರ್ದಿಕ್ ಪಾಂಡ್ಯ ವೈಫಲ್ಯದ ಬಗ್ಗೆ ಆಕಾಶ್ ಚೋಪ್ರಾ ಕಳವಳ!

ಚೆನ್ನೈ ಮೇ.02  : ಐಪಿಎಲ್ 2026ರಲ್ಲಿ ಹಾರ್ದಿಕ್ ಪಾಂಡ್ಯ ಅವರ ಕಳಪೆ ಪ್ರದರ್ಶನವನ್ನು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಎತ್ತಿ ತೋರಿಸಿದ್ದಾರೆ. ಪಾಂಡ್ಯ ನಾಯಕತ್ವದಲ್ಲೂ ಎಡವಟ್ಟಾಗಿದ್ದು, ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದೆ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಚೋಪ್ರಾ, ಪಾಂಡ್ಯ ಅವರ ಬ್ಯಾಟಿಂಗ್ ಮತ್ತು ಬೌಲಿಂಗ್ ಅಂಕಿಅಂಶಗಳನ್ನು ವಿವರಿಸಿದ್ದಾರೆ. “ಪಾಂಡ್ಯ ಈ ಸೀಸನ್‌ನಲ್ಲಿ ಇದುವರೆಗೆ ಎದುರಿಸಿದ 84 ಎಸೆತಗಳಲ್ಲಿ ಕೇವಲ 4 ಸಿಕ್ಸರ್‌ಗಳನ್ನು ಮಾತ್ರ ಬಾರಿಸಿದ್ದಾರೆ. ಅದೇ ನಿನ್ನೆಯ ಪಂದ್ಯದಲ್ಲಿ ಡೊನೊವನ್ ಫೆರೇರಾ ಕೇವಲ 14 ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸಿದ್ದರು. ಭಾರತದ ಶ್ರೇಷ್ಠ ವೈಟ್-ಬಾಲ್ ಆಲ್ ರೌಂಡರ್ ಎನಿಸಿಕೊಂಡಿರುವ ಹಾರ್ದಿಕ್, 84 ಎಸೆತಗಳಲ್ಲಿ ಕೇವಲ ನಾಲ್ಕು ಸಿಕ್ಸರ್ ಹೊಡೆದಿರುವುದು ಅಚ್ಚರಿ ಮೂಡಿಸಿದೆ. ಇನ್ನು ಬೌಲಿಂಗ್‌ನಲ್ಲಿ ಕೇವಲ ನಾಲ್ಕು ವಿಕೆಟ್ ಪಡೆದಿದ್ದು, 12ಕ್ಕೂ ಹೆಚ್ಚು ಎಕಾನಮಿ ರೇಟ್ ಹೊಂದಿದ್ದಾರೆ,” ಎಂದು ಚೋಪ್ರಾ ಹೇಳಿದ್ದಾರೆ.

ಆಟಗಾರನಾಗಿ ಮಾತ್ರವಲ್ಲದೆ, ನಾಯಕನಾಗಿಯೂ ಪಾಂಡ್ಯ ಪ್ರಭಾವ ಬೀರಲು ವಿಫಲರಾಗಿದ್ದಾರೆ. ಹಾರ್ದಿಕ್ ನೇತೃತ್ವದ ಮುಂಬೈ ತಂಡ 8 ಪಂದ್ಯಗಳಲ್ಲಿ ಕೇವಲ 2 ಜಯ ಮತ್ತು 6 ಸೋಲುಗಳೊಂದಿಗೆ 4 ಅಂಕಗಳನ್ನು ಪಡೆದು 9ನೇ ಸ್ಥಾನದಲ್ಲಿದೆ. ಪ್ಲೇ-ಆಫ್ ತಲುಪಲು ಮುಂಬೈ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಇನ್ನೊಂದು ಪಂದ್ಯ ಸೋತರೂ ಮುಂಬೈ ತಂಡದ ಐಪಿಎಲ್ 2026ರ ಅಭಿಯಾನ ಬಹುತೇಕ ಅಂತ್ಯವಾಗಲಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಸಂಕಷ್ಟ

2024ರಲ್ಲಿ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಬಿಟ್ಟು ಮುಂಬೈ ಇಂಡಿಯನ್ಸ್‌ಗೆ ಮರಳಿದ್ದು ದೊಡ್ಡ ಸುದ್ದಿಯಾಗಿತ್ತು. ಗುಜರಾತ್ ತಂಡಕ್ಕೆ 2022ರಲ್ಲಿ ಟ್ರೋಫಿ ಗೆಲ್ಲಿಸಿಕೊಟ್ಟಿದ್ದ ಅವರು, 2023ರಲ್ಲೂ ತಂಡವನ್ನು ಫೈನಲ್‌ಗೆ ಮುನ್ನಡೆಸಿದ್ದರು. ಇಷ್ಟೊಂದು ಯಶಸ್ಸಿನ ನಡುವೆಯೂ ಅವರು ಜಿಟಿ ತೊರೆದು ಮುಂಬೈ ಸೇರಿದ್ದು ಎಲ್ಲರಿಗೂ ಆಶ್ಚರ್ಯ ತಂದಿತ್ತು.

ಆದರೆ, ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡಕ್ಕೆ ಅದೃಷ್ಟ ಒಲಿದಿಲ್ಲ. 2024ರಲ್ಲಿ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. 2025ರಲ್ಲಿ ಎರಡನೇ ಸುತ್ತಿಗೆ ತಲುಪಿದರೂ, ಎರಡನೇ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತು ಹೊರಬಿದ್ದಿತ್ತು. ಈಗ 2026ರಲ್ಲೂ ತಂಡದ ಸ್ಥಿತಿ ಗಂಭೀರವಾಗಿದೆ.

ಮುಂಬೈ ಇಂಡಿಯನ್ಸ್ ತನ್ನ ಮುಂದಿನ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಆಡಲಿದೆ. ಈ ಬಹುನಿರೀಕ್ಷಿತ ಪಂದ್ಯವು ಇಂದು ಸಂಜೆ 7:30ಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಸೋತರೆ ಮುಂಬೈ ತಂಡದ ಪ್ಲೇ-ಆಫ್ ಆಸೆ ಸಂಪೂರ್ಣವಾಗಿ ಕಮರಿಹೋಗಲಿದೆ. ಸದ್ಯ ಸಿಎಸ್‌ಕೆ 8 ಪಂದ್ಯಗಳಲ್ಲಿ 3 ಜಯದೊಂದಿಗೆ 6 ಅಂಕಗಳನ್ನು ಹೊಂದಿದೆ.

ಚೆನ್ನೈ ಮೇ.02  : ಐಪಿಎಲ್ 2026ರಲ್ಲಿ ಹಾರ್ದಿಕ್ ಪಾಂಡ್ಯ ಅವರ ಕಳಪೆ ಪ್ರದರ್ಶನವನ್ನು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಎತ್ತಿ ತೋರಿಸಿದ್ದಾರೆ. ಪಾಂಡ್ಯ ನಾಯಕತ್ವದಲ್ಲೂ ಎಡವಟ್ಟಾಗಿದ್ದು, ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದೆ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಚೋಪ್ರಾ, ಪಾಂಡ್ಯ ಅವರ ಬ್ಯಾಟಿಂಗ್ ಮತ್ತು ಬೌಲಿಂಗ್ ಅಂಕಿಅಂಶಗಳನ್ನು ವಿವರಿಸಿದ್ದಾರೆ. “ಪಾಂಡ್ಯ ಈ ಸೀಸನ್‌ನಲ್ಲಿ ಇದುವರೆಗೆ ಎದುರಿಸಿದ 84 ಎಸೆತಗಳಲ್ಲಿ ಕೇವಲ 4 ಸಿಕ್ಸರ್‌ಗಳನ್ನು ಮಾತ್ರ ಬಾರಿಸಿದ್ದಾರೆ. ಅದೇ ನಿನ್ನೆಯ ಪಂದ್ಯದಲ್ಲಿ ಡೊನೊವನ್ ಫೆರೇರಾ ಕೇವಲ 14 ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸಿದ್ದರು. ಭಾರತದ ಶ್ರೇಷ್ಠ ವೈಟ್-ಬಾಲ್ ಆಲ್ ರೌಂಡರ್ ಎನಿಸಿಕೊಂಡಿರುವ ಹಾರ್ದಿಕ್, 84 ಎಸೆತಗಳಲ್ಲಿ ಕೇವಲ ನಾಲ್ಕು ಸಿಕ್ಸರ್ ಹೊಡೆದಿರುವುದು ಅಚ್ಚರಿ ಮೂಡಿಸಿದೆ. ಇನ್ನು ಬೌಲಿಂಗ್‌ನಲ್ಲಿ ಕೇವಲ ನಾಲ್ಕು ವಿಕೆಟ್ ಪಡೆದಿದ್ದು, 12ಕ್ಕೂ ಹೆಚ್ಚು ಎಕಾನಮಿ ರೇಟ್ ಹೊಂದಿದ್ದಾರೆ,” ಎಂದು ಚೋಪ್ರಾ ಹೇಳಿದ್ದಾರೆ.

ಆಟಗಾರನಾಗಿ ಮಾತ್ರವಲ್ಲದೆ, ನಾಯಕನಾಗಿಯೂ ಪಾಂಡ್ಯ ಪ್ರಭಾವ ಬೀರಲು ವಿಫಲರಾಗಿದ್ದಾರೆ. ಹಾರ್ದಿಕ್ ನೇತೃತ್ವದ ಮುಂಬೈ ತಂಡ 8 ಪಂದ್ಯಗಳಲ್ಲಿ ಕೇವಲ 2 ಜಯ ಮತ್ತು 6 ಸೋಲುಗಳೊಂದಿಗೆ 4 ಅಂಕಗಳನ್ನು ಪಡೆದು 9ನೇ ಸ್ಥಾನದಲ್ಲಿದೆ. ಪ್ಲೇ-ಆಫ್ ತಲುಪಲು ಮುಂಬೈ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಇನ್ನೊಂದು ಪಂದ್ಯ ಸೋತರೂ ಮುಂಬೈ ತಂಡದ ಐಪಿಎಲ್ 2026ರ ಅಭಿಯಾನ ಬಹುತೇಕ ಅಂತ್ಯವಾಗಲಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಸಂಕಷ್ಟ

2024ರಲ್ಲಿ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಬಿಟ್ಟು ಮುಂಬೈ ಇಂಡಿಯನ್ಸ್‌ಗೆ ಮರಳಿದ್ದು ದೊಡ್ಡ ಸುದ್ದಿಯಾಗಿತ್ತು. ಗುಜರಾತ್ ತಂಡಕ್ಕೆ 2022ರಲ್ಲಿ ಟ್ರೋಫಿ ಗೆಲ್ಲಿಸಿಕೊಟ್ಟಿದ್ದ ಅವರು, 2023ರಲ್ಲೂ ತಂಡವನ್ನು ಫೈನಲ್‌ಗೆ ಮುನ್ನಡೆಸಿದ್ದರು. ಇಷ್ಟೊಂದು ಯಶಸ್ಸಿನ ನಡುವೆಯೂ ಅವರು ಜಿಟಿ ತೊರೆದು ಮುಂಬೈ ಸೇರಿದ್ದು ಎಲ್ಲರಿಗೂ ಆಶ್ಚರ್ಯ ತಂದಿತ್ತು.

ಆದರೆ, ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡಕ್ಕೆ ಅದೃಷ್ಟ ಒಲಿದಿಲ್ಲ. 2024ರಲ್ಲಿ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. 2025ರಲ್ಲಿ ಎರಡನೇ ಸುತ್ತಿಗೆ ತಲುಪಿದರೂ, ಎರಡನೇ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತು ಹೊರಬಿದ್ದಿತ್ತು. ಈಗ 2026ರಲ್ಲೂ ತಂಡದ ಸ್ಥಿತಿ ಗಂಭೀರವಾಗಿದೆ.

ಮುಂಬೈ ಇಂಡಿಯನ್ಸ್ ತನ್ನ ಮುಂದಿನ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಆಡಲಿದೆ. ಈ ಬಹುನಿರೀಕ್ಷಿತ ಪಂದ್ಯವು ಇಂದು ಸಂಜೆ 7:30ಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಸೋತರೆ ಮುಂಬೈ ತಂಡದ ಪ್ಲೇ-ಆಫ್ ಆಸೆ ಸಂಪೂರ್ಣವಾಗಿ ಕಮರಿಹೋಗಲಿದೆ. ಸದ್ಯ ಸಿಎಸ್‌ಕೆ 8 ಪಂದ್ಯಗಳಲ್ಲಿ 3 ಜಯದೊಂದಿಗೆ 6 ಅಂಕಗಳನ್ನು ಹೊಂದಿದೆ.

More articles

Latest article

Most read