ಅಹಮದಾಬಾದ್: ಇಂದು ಮಧ್ಯಾಹ್ನ ಅಹಮದಾಬಾದ್ ನಗರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಏರ್ ಇಂಡಿಯಾ ವಿಮಾನದಲ್ಲಿದ್ದ ಬಹುತೇಕ ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಮೃತಪಟ್ಟಿದ್ದಾರೆ. ವಿಮಾನದಲ್ಲಿದ್ದ ಯಾರೊಬ್ಬರೂ ಉಳಿದಿಲ್ಲ ಎಂದು ಮಿಲಿಟಿರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈವರೆಗಿನ ಮಾಹಿತಿ ಪ್ರಕಾರ ಒಬ್ಬರು ಬದುಕಿರುವ ಮಾಹಿತಿ ಲಭ್ಯವಾಗಿದೆ.
ನಗರದ ಸರ್ದಾರ್ ವಲ್ಲಭ ಬಾಯ್ ಪಟೇಲ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ಟೀಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ತಾಂತ್ರಿಕ ವೈಫಲ್ಯದಂದ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದಿತ್ತು,
ಈ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೂ ಪ್ರಯಾಣಿಸುತ್ತಿದ್ದು, ಅವರೂ ಅಸು ನೀಗಿದ್ದಾರೆ. ಎಲ್ಲ ಪ್ರಯಾಣಿಕರೂ ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದು, ಡಿಎನ್ ಎ ಆಧಾರದಲ್ಲಿ ಮೃತ ಶವಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗುತ್ತದೆ.
ಕೆಲವು ಮೂಲಗಳ ಪ್ರಕಾರ ಕೆಲವು ಪ್ರಯಾಣಿಕರು ಬದುಕುಳಿದಿದ್ದಾರೆ ಎಂನ ಮಾಹಿತಿ ರವಾನೆಯಾಗುತ್ತಿದೆ. ರಮೇಶ್ ವಿಶ್ವಾಸ್ ಕುಮಾರ್ ಎಂಬ ಪ್ರಯಾಣಿಕರು ಬದುಕಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮತ್ತೊಬ್ಬ ಪ್ರಯಾಣಿಕರೂ ಇದ್ದಾರೆ ಎಂದು ಹೇಳಿದ್ದಾರೆ. ವಿಮಾನ ಡಿಕ್ಕಿ ಹೊಡೆದ ಹಾಸ್ಟೆಲ್ ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೆಲವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಿಮಾನ ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಮಿಲಿಟರಿ ಅಧಿಕಾರಿಗಳು, ಬದುಕುಳಿದ ಒಬ್ಬರೂ ಕಂಡು ಬರಲಿಲ್ಲ ಎಂದು ಆಘಾತ ವ್ಯಕ್ತಪಡಿಸಿದ್ದಾರೆ.
ಅಹಮದಾಬಾದ್ನಿಂದ ಲಂಡನ್ನತ್ತ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ವಿಮಾನ AI-171 ಇಂದು ಮಧ್ಯಾಹ್ನ 1.40 ಸುಮಾರಿಗೆ ಪತನಗೊಂಡಿದೆ. ವಿಮಾನದಲ್ಲಿ 10 ಸಿಬ್ಬಂದಿ ಸೇರಿದಂತೆ ಒಟ್ಟು 242 ಮಂದಿ ಇದ್ದರು. ಸೇನೆಯು 130 ಯೋಧರನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಿದೆ.
ದೇಶ ವಿದೇಶಗಳ ಮುಖ್ಯಸ್ಥರು ಈ ಘಾತಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಇಂಗ್ಲೆಂಡ್ ಪ್ರಧಾನಿ ಸೇರಿದಂತೆ ಅಂತರರಾಷ್ಟ್ರೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
10 ವಿಮಾನದ ಸಿಬ್ಬಂದಿ. ಪ್ರಯಾಣಿಕರ ಪೈಕಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎಂದು ತಿಳಿದು ಬಂದಿದೆ.