Saturday, July 27, 2024

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸುಮೋಟೋ ಕೇಸ್ : ಪತ್ರಕರ್ತರಿಗೆ ಪೊಲೀಸ್ ನೋಟಿಸ್

Most read

ಕುಮಟಾ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರು
ಇತ್ತೀಚೆಗೆ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮಾತನಾಡಿದ ಹಿನ್ನೆಲೆಯಲ್ಲಿ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಈ ವಿಷಯವಾಗಿ ಪತ್ರಕರ್ತರಿಗೂ ನೋಟಿಸ್ ನೀಡಿರುವುದಾಗಿ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ವರದಿ ಮಾಡಿದ ಪತ್ರಕರ್ತರಿಗೆ ತನಿಖೆ ಸಮಯದಲ್ಲಿ ಹಾಜರಿದ್ದು ಮಾಹಿತಿ ನೀಡುವಂತೆ ಕುಮಟಾ ಪರ್ತಕರ್ತರಿಗೆ ಪೊಲೀಸ್ ನೋಟಿಸ್ ನೀಡಲಾಗಿದೆ.

ಸಂಸದ ಅನಂತಕುಮಾರ ಹೆಗಡೆ ಅವರು ಪ್ರವಾಸಿ ಮಂದಿರದಲ್ಲಿ ಹಿಂದೂ ಹಾಗೂ ಮುಸ್ಲಿಂ
ಧರ್ಮದವರ ಕೋಮು ಸೌಹಾರ್ದತೆಗೆ ಧಕ್ಕೆ ಮಾಡುವ ಮತ್ತು ಧರ್ಮ-ಧರ್ಮಗಳ ನಡುವೆ ದ್ವೇಷವನ್ನುಂಟು ಮಾಡಿ ಸೌಹಾರ್ದತೆಗೆ ಭಾದಕವಾಗುವ ಹಾಗೆ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಕುಮಟಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜ. 24ರಂದು ಕುಮಟಾ ಠಾಣೆಯಲ್ಲಿ ನಡೆಯಲಿರುವ ತನಿಖೆ ಸಮಯದಲ್ಲಿ ಸೂಕ್ತ ದಾಖಲೆಯೊಂದಿಗೆ ಹಾಜರಿದ್ದು ಸಹಕರಿಸುವಂತೆ ಕುಮಟಾ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ ನೋಟಿಸ್ ನಲ್ಲಿ ತಿಳಿಸಿದ್ದಾರೆ.

More articles

Latest article