ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

Most read

ಸಂಡೂರು ಕಾಂಗ್ರೆಸ್‌ ಅಭ್ಯರ್ಥಿ ಈ. ಅನ್ನಪೂರ್ಣ ತುಕಾರಾಂ ಅವರು ಭರ್ಜರಿ ರೋಡ್‌ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮಾಜಿ ಸಚಿವ ಬಿ.ನಾಗೇಂದ್ರ , ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯಕ್‌ ಮತ್ತು ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯಕ್‌ ಹಾಜರಿದ್ದರು.

ಮೆರವಣಿಗೆಯಲ್ಲಿ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು ಭಾಗಿಯಾಗಿದ್ದರು. ತುಕಾರಾಂ ಅವರು ಬಳ್ಳಾರಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಉಪ ಚುನಾವಣೆ ನಡೆಯುತ್ತಿದೆ. ನವಂಬರ್‌ 13ರಂದು ಮತದಾನ ನಡೆಯಲಿದೆ.

More articles

Latest article