ವಿಧಾನಸಭೆ ಅಧಿವೇಶನ: ಅಮಾನತಾದ BJP ಶಾಸಕರನ್ನು ಸದನದಿಂದ ಹೊರಹಾಕಿದ ಮಾರ್ಷಲ್‌ ಗಳು

ಬೆಂಗಳೂರು: ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ, ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿಯ 18 ಶಾಸಕರನ್ನು ಮಾರ್ಷಲ್‌ ಗಳು ಸದನದಿಂದ ಹೊರಹಾಕಿದರು. ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಹನಿಟ್ರ್ಯಾಪ್‌ ಆರೋಪನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು. ಕಲಾಪ ನಡೆಸಲು ಅವಕಾಶ ಕೊಡಿ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮನವಿ ಮಾಡಿಕೊಂಡರೂ ಬಿಜೆಪಿ ಸದಸ್ಯರು ಪಟ್ಟು ಬಿಡಲಿಲ್ಲ.

ಒಂದು ಹಂತದಲ್ಲಿ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ ಸ್ಪೀಕರ್ ಅವರತ್ತ ಕಾಗದ ಪತ್ರಗಳನ್ನು ತೂರಿದರು. ಗದ್ದಲ ಹೆಚ್ಚಾದ ಕಾರಣ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಮಧ್ಯಾಹ್ನ ಕಲಾಪ ಆರಂಭವಾದ ನಂತರ ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು, ಗದ್ದಲ ನಡೆಸಿದ ಸದಸ್ಯರನ್ನು ಅಮಾನತು ಮಾಡುವಂತೆ ಪ್ರಸ್ತಾವನೆ ಮಂಡಿಸಿದರು. ಸಭಾಧ್ಯಕ್ಷರು 18 ಸದಸ್ಯರ ಹೆಸರು ಹೇಳಿ ಅಮಾನತು ಮಾಡಿದರು.

ಅಮಾನತುಗೊಂಡ ಎಲ್ಲ ಸದಸ್ಯರಿಗೆ ಸ್ವಯಂಪ್ರೇರಿತವಾಗಿ ಸದನದಿಂದ ಹೊರ ಹೋಗುವಂತೆ ಮನವಿ ಮಾಡಿದ್ದ ಸಭಾಧ್ಯಕ್ಷರು, ಹತ್ತು ನಿಮಿಷಗಳ ಕಾಲ ಕಲಾಪ ಮುಂದೂಡಿದರು. ಆದರೆ, ಅಮಾನತಾದವರು ಸ್ವಯಂಪ್ರೇರಿತವಾಗಿ ಹೊರ ಹೋಗದ ಕಾರಣ, ಮಾರ್ಷಲ್‌ ಗಳೇ ಅವರನ್ನು ಹೊತ್ತುಕೊಂಡು ಬಂದು ಸದನದಿಂದ ಹೊರಹಾಕಿದರು.

ಬೆಂಗಳೂರು: ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ, ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿಯ 18 ಶಾಸಕರನ್ನು ಮಾರ್ಷಲ್‌ ಗಳು ಸದನದಿಂದ ಹೊರಹಾಕಿದರು. ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಹನಿಟ್ರ್ಯಾಪ್‌ ಆರೋಪನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು. ಕಲಾಪ ನಡೆಸಲು ಅವಕಾಶ ಕೊಡಿ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮನವಿ ಮಾಡಿಕೊಂಡರೂ ಬಿಜೆಪಿ ಸದಸ್ಯರು ಪಟ್ಟು ಬಿಡಲಿಲ್ಲ.

ಒಂದು ಹಂತದಲ್ಲಿ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ ಸ್ಪೀಕರ್ ಅವರತ್ತ ಕಾಗದ ಪತ್ರಗಳನ್ನು ತೂರಿದರು. ಗದ್ದಲ ಹೆಚ್ಚಾದ ಕಾರಣ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಮಧ್ಯಾಹ್ನ ಕಲಾಪ ಆರಂಭವಾದ ನಂತರ ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರು, ಗದ್ದಲ ನಡೆಸಿದ ಸದಸ್ಯರನ್ನು ಅಮಾನತು ಮಾಡುವಂತೆ ಪ್ರಸ್ತಾವನೆ ಮಂಡಿಸಿದರು. ಸಭಾಧ್ಯಕ್ಷರು 18 ಸದಸ್ಯರ ಹೆಸರು ಹೇಳಿ ಅಮಾನತು ಮಾಡಿದರು.

ಅಮಾನತುಗೊಂಡ ಎಲ್ಲ ಸದಸ್ಯರಿಗೆ ಸ್ವಯಂಪ್ರೇರಿತವಾಗಿ ಸದನದಿಂದ ಹೊರ ಹೋಗುವಂತೆ ಮನವಿ ಮಾಡಿದ್ದ ಸಭಾಧ್ಯಕ್ಷರು, ಹತ್ತು ನಿಮಿಷಗಳ ಕಾಲ ಕಲಾಪ ಮುಂದೂಡಿದರು. ಆದರೆ, ಅಮಾನತಾದವರು ಸ್ವಯಂಪ್ರೇರಿತವಾಗಿ ಹೊರ ಹೋಗದ ಕಾರಣ, ಮಾರ್ಷಲ್‌ ಗಳೇ ಅವರನ್ನು ಹೊತ್ತುಕೊಂಡು ಬಂದು ಸದನದಿಂದ ಹೊರಹಾಕಿದರು.

More articles

Latest article

Most read