ಬೆಂಗಳೂರು: ವಿದ್ಯುನ್ಮಾನ ಮತ ಯಂತ್ರಗಳಿಗೆ (ಇವಿಎಂ) ಬದಲಿಗೆ ಬ್ಯಾಲೆಟ್ ಪತ್ರಗಳ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದೆ. ನಮ್ಮಅನುಭವದ ಆಧಾರದಲ್ಲಿ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು.
ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ ಪೋಲೀಸಿನವರೇ ಎಂದು ಉತ್ತರಿಸಿದರು.