ಬ್ಯಾಂಕ್-ಫೈನಾನ್ಸ್ ಸಾಲ: ರೈತರಿಗೆ ಕಿರುಕುಳ ನಿಲ್ಲಿಸಲು ಆಗ್ರಹ

Most read

ಜಗಳೂರು (ದಾವಣಗೆರೆ ಜಿಲ್ಲೆ): ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಮರುಪಾವತಿಸುವಂತೆ ರೈತರಿಗೆ ನೋಟಿಸ್ ನೀಡುತ್ತಿದ್ದು ಅದನ್ನು ತಡೆ ಹಿಡಿಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವನಹಳ್ಳಿ ಮಂಜುನಾಥ್ ಬಣದ ವತಿಯಿಂದ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ತಾಲ್ಲೂಕು ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ತಾಲ್ಲೂಕು ಕಚೇರಿ ಎದುರು ಜಮಾಯಿಸಿ ತಹಸೀಲ್ದಾರ್ ಸೈಯದ್ ಕಲೀಮ್ ಉಲ್ಲಾ ಅವರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಮಾತನಾಡಿ, ಗಡಗೊಂಡಣಹಳ್ಳಿ ಗ್ರಾಮದ ರೈತನೊರ್ವನಿಗೆ ಖಾಸಗಿ ಟ್ರ್ಯಾಕ್ಟರ್ ಫೈನಾನ್ಸ್ ಕಂಪನಿಯ ಸಾಲ ಮರು ಪಾವತಿಸಿದ ಹಿನ್ನೆಲೆಯಲ್ಲಿ ಆತನ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ‌. ಮುಂದಿನ ದಿನಗಳಲ್ಲಿ ಇಂಥ ಪ್ರಕರಣಗಳು ನಡೆದಲ್ಲಿ ಉಗ್ರ ಪ್ರತಿಭಟನೆ ನೆಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಚಿರಂಜೀವಿ , ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರಾಜನಹಟ್ಟಿ ರಾಜು , ಎಂ. ಶರಣಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.

ವರದಿ: ಎಂ.ಡಿ. ಅಬ್ದುಲ್ ರಖೀಬ್ ಜೆ.ಎಫ್

More articles

Latest article