ಡಿಕೆ ಶಿವಕುಮಾರ್​ನ ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಮಾಡ್ತಿದ್ದಾರೆ: ಯತ್ನಾಳ್

Most read

ವಿಜಯೇಂದ್ರ ಮುಡಾ ಕುರಿತು ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಮಾತನಾಡಿದ ಯತ್ನಾಳ್, ಡಿ.ಕೆ ಶಿವಕುಮಾರ್ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಮಾಡುತ್ತಿರುವ ಹೊಂದಾಣಿಕೆ ರಾಜಕಾರಣ ಪಾದಯಾತ್ರೆ, ಡಿ.ಕೆ ಶಿವಕುಮಾರ್ ಉಪಕಾರ ತೀರಿಸಲು ಹೋರಾಟ ಮಾಡ್ತಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

ಗ್ಯಾರಂಠಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಸರ್ಕಾರ ದಿವಾಳಿಯಾಗಿದೆ, ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿ ಬೇಕು. 2 ಸಾವಿರ ಭಾಗ್ಯ ಲಕ್ಷ್ಮೀ ಹಣ ಕೂಡ 3 ತಿಂಗಳಿನಿಂದ ಬರುತ್ತಿಲ್ಲ. ಭಾಗ್ಯದ ಲಕ್ಷ್ಮಿ, ಲಕ್ಷ್ಮಿ ಅಕ್ಕಾ ಬೆಳಗಾವಿಯಲ್ಲೆ ಕೂತಿದ್ದಾರೆ. ಅಕ್ಕಾ ರೊಕ್ಕಾ ಕೊಡವ್ವಾ, ಇಲ್ಲಾಂದ್ರೆ ಮನೆಗೆ ಹೋಗವ್ವಾ ಎಂದು ಹೋರಾಟ ಶುರು ಮಾಡಬೇಕಾಗುತ್ತದೆ ಎಂದ ಯತ್ನಾಳ್ ಕರೆಕೊಟ್ಟಿದ್ದಾರೆ.

More articles

Latest article